ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದ ಮರುದಿನವೇ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಲು ಕಾರಣವಾಗಿದೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಈ ಅನುಮಾನದ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ, ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್ ಬಾಕ್ಸ್ಗಳಿಗೂ ಸಂಬಂಧ ಇಲ್ಲ. ಉಪ ಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸ್ ಗಳು ನಿರುಪಯಕ್ತವಾಗಿದ್ದವು ಎಂದರು.
ಪತ್ತೆಯಾಗಿರುವ ಬ್ಯಾಲೆಟ್ ಬಾಕ್ಸ್ ಗಳು ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿತ್ತು ಎಂದರು.
ಹಲವು ವರ್ಷಗಳ ಹಿಂದೆಯೇ ಗೋದಾಮಿನಲ್ಲಿ ತಂದಿಡಲಾಗಿತ್ತು. ಕಿಡಿಗೇಡಿಗಳು ಬಾಕ್ಸ್ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದರು.
ಬಳಕೆಯಲ್ಲಿಲ್ಲದ ಈ ಬ್ಯಾಲೆಟ್ ಬಾಕ್ಸ್ಗಳನ್ನು ಇಟ್ಟಿದ್ದ ಗೋದಾಮಿಗೆ ಭೇಟಿ ನೀಡಿದ ಪೊಲೀಸರು ಮತ್ತು ಹಾವೇರಿ ತಹಶೀಲ್ದಾರ್ ಶರಣಮ್ಮ ಪರಿಶೀಲನೆ ನಡೆಸಿದರು. ಪೊಲೀಸರು ಕಂದಾಯ ಇಲಾಖೆಯವರಿಂದ ದೂರು ಪಡೆದು ತನಿಖೆ ಮುಂದುವರೆಸಿದ್ದಾರೆ.


