ಬಳ್ಳಾರಿ: ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ಗದಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ಗ.ಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೀಗಾಗಿ 10 ಅಶ್ವಶಕ್ತಿಗಿಂತ ಹೆಚ್ಚು ಸಾಮರ್ಥ್ಯದ ಅಕ್ರಮ ಪಂಪ್ ಸೆಟ್ಗ ಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ಗಿಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿದೆ ಎಂದರು.
ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ಗುಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ಗರಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ಗಿಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ಗದಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ಗ ಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.




