ಬೆಂಗಳೂರು: ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸುತ್ತಾ ಮೊಬೈಲ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಆಂಧ್ರದ ಗೋಕಾರಂ ಗ್ಯಾಂಗ್ ಬಂಧಿಸಿರುವ ವೈಟ್ಪೀಲ್ಡ್ ಪೊಲೀಸರು 30 ಲಕ್ಷ ಮೌಲ್ಯದ 107 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಂಧ್ರಪ್ರದೇಶದ ಗೋಕಾರಂ ಗ್ಯಾಂಗ್ ನ ವೆಂಕಟೇಶ್, ರವಿತೇಜ್, ಪೆದ್ದಪ್ಪ, ಬಾಲರಾಜ್, ರಮೇಶ್ ಹಾಗೂ ಸಾಯಿಕುಮಾರ್ ಸೇರಿ 6 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.
ಬಂಧಿತ ಗ್ಯಾಂಗ್ ನಿಂದ 30 ಲಕ್ಷ ಮೌಲ್ಯದ 107 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದು ಅವುಗಳಲ್ಲಿ ಒಬ್ಬ ವಾರಸುದಾರ ಪತ್ತೆಯಾಗಿದ್ದು, ಉಳಿದ ಮೊಬೈಲ್ ಗಳ ವಾರಸುದಾರರು ವೈಟ್ಫೀಲ್ಡ್ ಪೊಲೀಸರನ್ನು ಸಂಪರ್ಕಿಸಲು ಮನವಿ ಮಾಡಿದರು.
ಕಳೆದ ಏಪ್ರಿಲ್ 4ರಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕಳವು ಪ್ರಕರಣವನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡ ವೈಟ್ಪೀಲ್ಡ್ ಪೊಲೀಸರು ಖಚಿತ ಮಾಹಿತಿ ಆಧರಿಸಿ ಗ್ಯಾಂಗ್ ನ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಆರೋಪಿಗಳು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚೆನ್ನಸಂದ್ರದಲ್ಲಿ ಒಂದು ಬಾಡಿಗೆ ರೂಮ್ನ್ನು ಮಾಡಿದ್ದು, ಈ ರೂಮ್ನ್ನು ಪರಿಶೀಲಿಸಲಾಗಿ 80 ವಿವಿಧ ಕಂಪನಿಯ ಕಳ್ಳತನ ಮಾಡಿರುವ ಮೊಬೈಲ್ ಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿದ್ದು ಅವುಗಳನ್ನು ಜಪ್ತಿ ಮಾಡಲಾಗಿದೆ.
ಅಲ್ಲದೆ ಈ ಆರೋಪಿಗಳು ಅವಲಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮತ್ತೊಂದು ಬಾಡಿಗೆ ರೂಮ್ನ್ನು ಹೊಂದಿದ್ದು, ಆ ರೂಮ್ನ್ನೂ ಸಹ ಪರಿಶೀಲಿಸಲಾಗಿ ಅಲ್ಲಿ 24 ವಿವಿಧ ಕಂಪನಿಯ ಕಳ್ಳತನ ಮಾಡಿರುವ ಮೊಬೈಲ್ ಫೋನ್ಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿರುತ್ತದೆ. ಈ ಎಲ್ಲಾ 107 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಆರೋಪಿಗಳು ಜನಸಂದಣಿ ಇರುವ ಬಿ.ಎಂ.ಟಿ.ಸಿ. ಬಸ್ಗಳನ್ನು ಗುರಿಯಾಗಿಸಿಕೊಂಡು ಸಾರ್ವಜನಿಕರ ಮೊಬೈಲ್ ಫೋನ್ಗಳನ್ನು ಸಾರ್ವಜನಿಕರ ಅರಿವಿಗೆ ಬಾರದಂತೆ ಪಿಕ್ ಪಾಕೆಟಿಂಗ್/ಕಳ್ಳತನ ಮಾಡಿಕೊಂಡು, ನಂತರ ಕದ್ದ ಮಾಲುಗಳನ್ನು ಒಂದು ಕಡೆ ಶೇಖರಿಸಿ, ಅವುಗಳನ್ನು ಅಂತರ ರಾಜ್ಯ ಬಸ್ಗಳ ಮುಖಾಂತರ ಹೊರರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಮಾರಾಟ ಮಾಡುತ್ತಿರುತ್ತಾರೆ ಎಂಬ ಮಾಹಿತಿಯು ತನಿಖೆಯಿಂದ ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು.
ಕಾರ್ಯಾಚರಣೆಯನ್ನು ವೈಟ್ಫೀಲ್ಡ್ ಡಿಸಿಪಿ ಡಾ. ಶಿವಕುಮಾರ್, ಎಸಿಪಿ ಕವಿತಾ.ಎಂ.ಸಿ, ನೇತೃತ್ವದಲ್ಲಿ ವೈಟ್ಫೀಲ್ಡ್ ಪೊಲೀಸ್ ಅಧಿಕಾರಿ ಸಿಬ್ಬಂದಿ ನಡೆಸಿದ್ದಾರೆ ಎಂದರು.




