ಮಂಗಳೂರು: ಗಡಿ ಜಿಲ್ಲೆ, ಬೀದರ್ ನಲ್ಲಿ ನಡೆದ ಎಟಿಎಂ ದರೋಡೆ ಪ್ರಕರಣ ಬೆಚ್ಚಿ ಬೀಳಿಸಿರುವ ಬೆನ್ನಲ್ಲೇ ಮಂಗಳೂರು ಹೊರವಲಯದ ಉಳ್ಳಾಳ ಸಮೀಪ ಬ್ಯಾಂಕ್ ದರೋಡೆ ನಡೆದಿದೆ. ಈ ಪ್ರಕರಣ ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ, ನಗದು ಲೂಟಿ ಮಾಡಿದ್ದಾರೆ.
ದರೋಡೆಕೋರರು ಕೈಯಲ್ಲಿ ಬಂದೂಕು, ತಲವಾರು, ಚಾಕು ಹಿಡಿದಿದ್ದರು. ಈ ವೇಳೆ ಬ್ಯಾಂಕ್ ನಲ್ಲಿ ನಾಲ್ಕೈದು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಸಿಬ್ಬಂದಿಗೆ ಬಂದೂಕು ತೋರಿಸಿ ಲಾಕರ್ ಬಾಗಿಲು ತೆಗೆಸಿದ ದರೋಡೆಕೋರರು ಚಿನ್ನ, ನಗದನ್ನು ಚೀಲದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಕಳವಾದ ಚಿನ್ನಾಭರಣ, ನಗದು ಅಂದಾಜು ₹ 10-12 ಕೋಟಿ ಇರಬಹುದು ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ದರೋಡೆಕೋರರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದರೋಡೆಕೋರರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.
ಬ್ಯಾಂಕ್ ನ ಕೆಳಗಿನ ಮಹಡಿಯಲ್ಲಿರುವ ಬೇಕರಿಯಲ್ಲಿದ್ದ ಕೆಲ ವಿದ್ಯಾರ್ಥಿಗಳು ಸಿಬ್ಬಂದಿ ಕೂಗಿಕೊಳ್ಳುವುದನ್ನು ಕೇಳಿ ಅತ್ತ ಓಡಿದಾಗ, ದರೋಡೆಕೋರರು ಅವರನ್ನು ಬೆದರಿಸಿದ್ದಾರೆ. ವಿದ್ಯಾರ್ಥಿಗಳ ಬಳಿ ಅವರು ಕನ್ನಡದಲ್ಲಿ ಮಾತನಾಡಿದ್ದರೆ, ಬ್ಯಾಂಕ್ ಸಿಬ್ಬಂದಿ ಬಳಿ ಹಿಂದಿಯಲ್ಲಿ ಮಾತನಾಡಿದ್ದಾರೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.




