ಧಾರವಾಡ: ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತದಲ್ಲಿ 107 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರದ ರೂ. 180 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈಗಾಗಲೇ ಸುಮಾರು ರೂ. 60 ಕೋಟಿ ವೆಚ್ಚದ 40 ಕೆರೆಗಳನ್ನು ತುಂಬುವ ಕಾರ್ಯ ಸಂತೋಷ್ ಲಾಡ್ ಅವರ ಅವಿರತ ಪ್ರಯತ್ನದಿಂದ ಪೂರ್ಣಗೊಂಡಿದ್ದು, ಇದೀಗ ಎರಡನೇ ಹಂತಕ್ಕೆ ಸರ್ಕಾರ ಹಣ ನೀಡಿದೆ. ಬಹು ನಿರೀಕ್ಷಿತ ಯೋಜನೆಗೆ ಸರ್ಕಾರ ಸ್ಪಂದಿಸಿರುವುದಕ್ಕೆ ಅನ್ನದಾತರು ಖುಷಿಗೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಯ ಎರಡನೇ ಹಂತದ 107 ಕೆರೆಗಳನ್ನು ತುಂಬುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ಕೊಡಿಸಲು ಲಾಡ್ ಅವರು ಸಾಕಷ್ಟು ಶ್ರಮಿಸಿದ್ದರು. ಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂತೋಷ್ ಲಾಡ್ ಅವರು ತಾಲೂಕಿನ ಅನ್ನದಾತರಿಗೆ ಕೊಟ್ಟ ಮಾತನ್ನು ಮತ್ತೊಮ್ಮೆ ಉಳಿಸಿಕೊಂಡಿದ್ದಾರೆ.
ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಲಾಡ್: ಬಹು ನಿರೀಕ್ಷಿತ ಯೋಜನೆಯ ಸಾಕಾರಕ್ಕೆ ಸಹಕಾರ ನೀಡುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ, ಉಪ ಮುಖ್ಯಮಂತ್ರಿಗಳು ಹಾಗೂ ಬೃಹತ್ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಸಚಿವ ಲಾಡ್ ಅವರು ಧನ್ಯವಾದ ತಿಳಿಸಿದ್ದಾರೆ.
ಸಚಿವರಿಗೆ ಅನ್ನದಾತರಿಂದ ಕೃತಜ್ಞತೆ: ಸಚಿವ ಲಾಡ್ ಅವರ ಅವಿರತ ಶ್ರಮದಿಂದ ಈ ಕಾರ್ಯ ಸಾಕಾರವಾಗಿದ್ದು, ಅಸಂಖ್ಯಾತ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕಲಘಟಗಿಯಂತಹ ನೀರಿನ ಕೊರತೆಯ ತಾಲೂಕಿಗೆ ಇಂತಹ ಯೋಜನೆ ಅವಶ್ಯವಾಗಿ ಬೇಕಾಗಿತ್ತು. ಇದೀಗ ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಆಧುನಿಕ ಭಗೀರಥನಂತೆ ಸಚಿವ ಲಾಡ್ ಅವರು ನಮಗಾಗಿ ದುಡಿದಿದ್ದಾರೆ ಎಂದು ಕಲಘಟಗಿಯ ರೈತರು ಖುಷಿ ವ್ಯಕ್ತಪಡಿಸಿದ್ದಾರೆ.




