ಅನಧಿಕೃತ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ

1 year ago

ಧಾರವಾಡ: ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಯಿತು.

ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3 ಟ್ರ್ಯಾಕ್ಟರ್ಗಳನ್ನು ಜಪ್ತಿ ಮಾಡಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ ಮತ್ತು ಈ ಕುರಿತು ಭೂಮಾಲೀಕರಿಗೆ ನೋಟಿಸ್ ನೀಡಲಾಗಿದೆ.

Leave a Reply