ಬೆಂಗಳೂರು: 1.40 ಕೋಟಿ ಜನಸಂಖ್ಯೆ ಇದ್ದು, 1.10 ಲಕ್ಷ ನೋಂದಾಯಿತ ವಾಹನಗಳಿದ್ದು, ಇದು ನಗರದ ಜನಜೀವನದ ಮೇಲೆ ವಿಪರೀತ ಒತ್ತಡ ಸೃಷ್ಟಿಸಿದೆ. ಆದ್ದರಿಂದ ಕೈಗಾರಿಕೆಗಳು ಬೆಂಗಳೂರಿನಿಂದ ಹೊರಗಿರುವ ಪ್ರದೇಶಗಳಿಗೆ ಹೋಗುವುದನ್ನು ಉತ್ತೇಜಿಸಲಾಗುತ್ತಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹವನ್ನೇ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೂ ಹೊಸ ನೀತಿ ತರಲಾಗಿದೆ. ವಿಶೇಷವಾಗಿ ರಾಜ್ಯದ 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಗಮನ ಹರಿಸಲಿದ್ದೇವೆ. ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನೆರವಿಗೆ ಪೋರ್ಟಲ್ ಆರಂಭಿಸಲಾಗಿದೆ ಎಂದರು.
ರಾಜ್ಯದಲ್ಲಿ ಭೂಮಿಯ ಬೆಲೆ ಜಾಸ್ತಿ ಇದೆ. ಹೀಗಾಗಿ ಉದ್ಯಮಿಗಳಿಗೆ ನೆರವು ನೀಡುವ ಬೇರೆಬೇರೆ ಕ್ರಮಗಳತ್ತ ಚಿಂತಿಸಲಾಗುತ್ತಿದೆ. ನಾವು ಹೂಡಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆಯೇ ವಿನಾ ನೆರೆಹೊರೆಯ ರಾಜ್ಯಗಳ ಜತೆಯಲ್ಲ. ಭೂಮಿಯ ಬೆಲೆ ಹೆಚ್ಚಾಗಲು ಇದೂ ಒಂದು ಕಾರಣವಾಗಿದೆ ಎಂದರು.




