ಮೂರು ವಾಹನ ಜಪ್ತಿ
ಬಳ್ಳಾರಿ: ಸಿರುಗುಪ್ಪ ತಾಲ್ಲೂಕು ವ್ಯಾಪ್ತಿಯಲ್ಲಿ ಅರಳಿಗನೂರು ಕಡೆಯಿಂದ ಸಿರುಗುಪ್ಪ ಪಟ್ಟಣದ ಕಡೆಗೆ ಶನಿವಾರ ಬೆಳಗಿನ ಜಾವ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಮೂರು ವಾಹನಗಳನ್ನು ಜಪ್ತಿ ಮಾಡಿ, 385 ಅಕ್ಕಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿರುಗುಪ್ಪ ತಾಲ್ಲೂಕಿನ ಆಹಾರ ನಿರೀಕ್ಷಕ ಎಂ.ವಿಜಯ್ ಕುಮಾರ್ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಕ್ಕಿ ಸರ್ಕಾರದ ವಿವಿಧ ಯೋಜನೆಗಳಡಿ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಣೆ ಮಾಡುವ ಪಡಿತರ ಅಕ್ಕಿಯಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ವಿವಿಧ ಕಾನೂನುಗಳಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿರುಗುಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದಿದ್ದಾರೆ.




