5 ದಿನ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರದ ಅನುಮತಿ

5 years ago

ಬೆಂಗಳೂರು: ಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಉನ್ನತಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ 5 ದಿನಗಳವರೆಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

Leave a Reply