ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ ಎಂದು ಬಿಜೆಪಿ ಆರೋಪಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಬೆಂಕಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ? ಎಂದು ಪ್ರಶ್ನಿಸಿದೆ.




