ಬೆಂಗಳೂರು: ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಕಾಂಗ್ರೆಸ್ ಇದೀಗ ಸರ್ಕಾರದ ಸಾಧನೆಗಳು ಮತ್ತು ನಿಲುವುಗಳನ್ನು ಜನರ ಮುಂದೆ ಇಡಲು ಐವರು ಸಚಿವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಿಸಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಕೆಲವು ಮಂತ್ರಿಗಳು ಮತ್ತು ಶಾಸಕರುಗಳಿಂದ ಸರ್ಕಾರಕ್ಕೆ ಸಂಬಂಧಿಸಿದ ಗಂಭೀರ ವಿಚಾರಗಳ ಕುರಿತು ಗೊಂದಲಕಾರಿ ಹೇಳಿಕೆಗಳು ಹೊರಬರುವುದನ್ನು ನಿಯಂತ್ರಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಐವರು ಸಚಿವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರನ್ನು ವಕ್ತಾರರನ್ನಾಗಿ ನೇಮಿಸಲಾಗಿದೆ.



