ಸನ್ಮಾನ್ಯ R Ashoka ಅವರೇ, ಯಾಕೆ ನಮ್ಮ ಕೈಯಲ್ಲಿ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತೀರಿ? ರಾಜ್ಯ ಸರ್ಕಾರದ ಸಾಲದ ಲೆಕ್ಕ ಹೇಳಿದ್ದೀರಿ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ನಿಮ್ಮದೇ ಪಕ್ಷದ ಸರ್ಕಾರದ ಸಾಲದ ಕತೆಯನ್ನು ಸ್ವಲ್ಪ ಹೇಳಿ ಬಿಡಿ. ನೀವು ಮರೆತಿದ್ದರೆ ನಾನು ಹೇಳುತ್ತೇನೆ ಕೇಳಿ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
2014ರಲ್ಲಿ ಕೇವಲ ರೂ.55 ಲಕ್ಷ ಕೋಟಿಯಷ್ಟು ಇದ್ದ ಭಾರತದ ಸಾಲ ಈ ಹಣಕಾಸಿನ ವರ್ಷದಲ್ಲಿ ರೂ.183.67 ಲಕ್ಷ ಕೋಟಿಗೆ ತಲುಪಿದೆ. ಹತ್ತು ವರ್ಷಗಳಲ್ಲಿ Narendra Modi ಅವರು ಮಾಡಿರುವ ಸಾಲ ರೂ.123 ಲಕ್ಷ ಕೋಟಿ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಮೇಲೆ 92 ಸಾವಿರ ರೂಪಾಯಿಗಳ ಸಾಲದ ಹೊರೆ ಇದೆ. “ಸಬ್ ಕಾ ಸಾಥ್ ಸಬ್ ಕೋ ಸಾಲ”.
ಅಶೋಕ್ ಅವರೇ, ನಿಮಗೆ ಈ ಆರ್ಥಿಕ ವ್ಯವಹಾರಗಳು ಅರ್ಥವಾಗುವುದಿದ್ದರೆ ಸ್ವಲ್ಪ ಕೇಳಿಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರದ ಸಾಲ ‘’ಹಣಕಾಸು ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್ ಆರ್ ಬಿ)ಯ ವ್ಯಾಪ್ತಿಯಲ್ಲಿಯೇ ಇದೆ. ನಮ್ಮ ಸಾಲ ಒಟ್ಟು ಸಾಲ ಒಂದು ಲಕ್ಷ ಕೋಟಿಯನ್ನು ಮೀರಿದ್ದರೂ ಅದು ನಮ್ಮ ಜಿಎಸ್ಡಿಪಿಯ ಶೇಕಡ 25ರ ಮಿತಿಯೊಳಗೆಯೇ ಇದೆ. ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್ಡಿಪಿಯ ಶೇಕಡಾ ಮೂರನ್ನು ಮೀರಿಲ್ಲ.
ಕೇಂದ್ರದ Bharatiya Janata Party (BJP) ಆಡಳಿತದಲ್ಲಿ ಸರ್ಕಾರದ ಸಾಲ ಮಾತ್ರ ಹೆಚ್ಚಾಗುತ್ತಿಲ್ಲ, ಅವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ವೈಯಕ್ತಿಕ ಸಾಲ ಕೂಡಾ ಹೆಚ್ಚಾಗುತ್ತಿದ್ದರೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿಯತ್ತಿದೆ. ಹಾಗಿದ್ದರೆ ನರೇಂದ್ರ ಮೋದಿ ಸರ್ಕಾರದ ಸಾಲದ ಹಣ ಎಲ್ಲಿ ಸೋರಿಹೋಗುತ್ತಿದೆ?
ಬೆಲೆ ಏರಿಕೆ, ನಿರುದ್ಯೋಗಗಳಿಂದಾಗಿ ತತ್ತರಿಸಿ ಹೋಗಿರುವ ರಾಜ್ಯದ ಜನತೆ ನಮ್ಮ ಗ್ಯಾರಂಟಿ ಮತ್ತು ಇತರ ಜನ ಕಲ್ಯಾಣ ಯೋಜನೆಗಳಿಂದಾಗಿ ಉಸಿರಾಡುವಂತಾಗಿದೆ. ಗ್ಯಾರಂಟಿ ಯೋಜನಗೆಳು ರಾಜ್ಯದ ಒಂದೂವರೆ ಕೋಟಿ ಕುಟುಂಬಗಳನ್ನು ನೇರವಾಗಿ ತಲುಪಿದೆ. 1.22 ಕೋಟಿ ಮಹಿಳೆಯರು ನಮ್ಮ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ನಮ್ಮ ಗ್ಯಾರಂಟಿ ಮತ್ತಿತರ ಕಲ್ಯಾಣ ಯೋಜನೆಗಳಿಂದಾಗಿ ಪ್ರತಿ ಕುಟುಂಬದ ಮಾಸಿಕ ಆದಾಯ ಏಳರಿಂದ ಹತ್ತು ಸಾವಿರ ರೂಪಾಯಿಗಳಷ್ಟು ಹೆಚ್ಚಾಗಿದೆ.
ಮಾನ್ಯ ಅಶೋಕ್ ಅವರೇ, ಬೆಂಗಳೂರು ನಗರದಲ್ಲಿ ಕೂತು ಆಧಾರವಿಲ್ಲದ ರಾಜಕೀಯ ಹೇಳಿಕೆಗಳನ್ನು ನೀಡುತ್ತಾ ಕಾಲ ಹರಣ ಮಾಡಬೇಡಿ. ಹಳ್ಳಿಗಳಿಗೆ ಹೋಗಿ ನಿಮ್ಮ BJP Karnataka ಪಕ್ಷದ ಬೆಂಬಲಿಗರ ಜೊತೆಯಲ್ಲಿಯೇ ಮಾತನಾಡಿ. ನಮ್ಮ ಸರ್ಕಾರದ ಯೋಜನೆಗಳಿಂದ ಅವರು ಏನನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೆ ಕೇಳಿ ನೋಡಿ. ಇಡೀ ಕರ್ನಾಟಕ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡುತ್ತಿದೆ.
– ಸಿದ್ದರಾಮಯ್ಯ, ಸಿಎಂ




