ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ದಾಸರಹಳ್ಳಿ ವಾರ್ಡ್ ಬಸವ ವನ ಉದ್ಯಾನವನದಲ್ಲಿ ಬಸವ ಜಯಂತಿ ಅಚರಣೆ ಪ್ರಯುಕ್ತ ಮಾಜಿ ಸಚಿವ, ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣರವರು ಕಾಯಕ ಯೋಗಿ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಇದೇ ಸಂದರ್ಭದಲ್ಲಿ ಮಾತಾಡಿದ ವಿ.ಸೋಮಣ್ಣ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತ ಕಾಯಕ ಮಹತ್ವವನ್ನು ವಿಶ್ವಕ್ಕೆ ಸಾರಿದ ಮಹಾನ್ ಸಂತ ಕಾಯಕ ಯೋಗಿ ಜಗಜ್ಯೋತಿ ಬಸವೇಶ್ವರರು. 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಮೊದಲನೇಯ ಸಂಸತ್ತು ಸ್ಥಾಪಕ ಬಸವೇಶ್ವರರು ಎಂದರು.
ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸಮಾನತೆ ತೊಲಗಿಸಲು ಕಾಯಕಯೋಗಿ ಬಸವೇಶ್ವರರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಾಗಿದಾಗ ಮಾತ್ರ ಸಮಾನತೆ, ಜಾತಿ ನಿರ್ಮೂಲನೆ ಹಾಗೂ ಸಮ ಸಮಾಜ ನಿರ್ಮಾಣ ಮಾಡಬಹುದು ಎಂದರು.
ಪ್ರತಿಯೊಬ್ಬರು ಶ್ರದ್ದೆ, ಭಕ್ತಿಯಿಂದ ತಮ್ಮ ಕಾಯಕ ಮಾಡಬೇಕು. ದುಡಿದ ಹಣದಲ್ಲಿ ಸ್ವಲ್ಪ ಹಣವನ್ನು ಸಮಾಜಕ್ಕೆ ಉಪಯೋಗ ಮಾಡಬೇಕು ಹಾಗೂ ದಾಸೋಹ ಮಹತ್ವವನ್ನು ಸಾರಿದರು ಎಂದರು.
ಇಂದಿನ ಕಲುಷಿತ ಸಮಾಜವನ್ನು ಸರಿಪಡಿಸಲು ಪ್ರತಿಯೊಬ್ಬರು ಜಗಜ್ಯೋತಿ ಬಸವೇಶ್ವರರ ಸಿದ್ದಾಂತವನ್ನು ಜೀವನದಲ್ಲಿ ಜೀವನದಲ್ಲಿ ಆಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.
ವಿಶ್ವನಾಥಗೌಡ, ದಾಸೇಗೌಡ, ಬಿಜೆಪಿ ಶ್ರೀಧರ್, ಹೆಚ್.ರಮೇಶ್, ವೇಣುಗೋಪಾಲ್, ವಾರ್ಡ್ ಅಧ್ಯಕ್ಷ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.




