ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ತಮ್ಮ ಸರ್ಕಾರ ಉಳಿಸಿಕೊಳ್ಳಲಿ ಎಂದಿರುವ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್, ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಪತನವಾಗಲಿದೆ ಎನ್ನುವ ಶಿಂಧೆ ಅವರು, ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದರು.
ಲೋಕಸಭಾ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪತನಾಗುವುದು ಎಂಬುದು ಭ್ರಮೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ ಎಂದರು.
ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದರು.
ಏಕನಾಥ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ ಎಂದರು.




