ಬೆಂಗಳೂರು: ಹಾವೇರಿ ಜಿಲ್ಲೆಗೆ ಅಗತ್ಯವಿರುವ ಡಿಎಪಿ, ಯುರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರವನ್ನು ಕೂಡಲೇ ಸರಬರಾಜು ಮಾಡುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ಆಗ್ರಹಿಸಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿರುವ ಬೊಮ್ಮಾಯಿ, ತಮಗೆ ಈಗಾಗಲೇ ಇರುವ ಮಾಹಿತಿಯಂತೆ ಕಳೆದ ಒಂದು ವರ್ಷ ನಮ್ಮ ರೈತರು ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ ಎಂದಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಳೆದ ವರ್ಷ ಅವರು ಬಿತ್ತನೆ ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ಚಟುವಟಿಕೆಗಳಿಗೆ ವೆಚ್ಚವನ್ನು ಮಾಡಿ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ಸಾಲದ ಹೊರೆ ರೈತರ ಮೇಲೆ ಹೆಚ್ಚಾಗಿ ಇದ್ದು, ಕೆಲವರಂತೂ ಆತ್ಮಹತ್ಯೆಗೆ ಶರಣಾಗಿರುತ್ತಾರೆ. ತಾವು ರೈತರಿಗೆ ಪರಿಹಾರ ಕೊಟ್ಟಿರುವುದು ಅತ್ಯಲ್ಪ ಹಾಗೂ ತಡವಾಗಿದೆ ಮತ್ತು ತಮ್ಮ ಇಲಾಖೆ ತಿಳಿಸಿದಂತೆ ಆಹಾರ ಧಾನ್ಯ ಉತ್ಪಾದನೆಯಲ್ಲಿ 50% ಕಡಿಮೆಯಾಗಿದೆ ಎಂದಿದ್ದಾರೆ.
ಮೇಲೆ ಕಾಣಿಸಿದ ಎಲ್ಲಾ ಕಾರಣಗಳು ಮತ್ತು ಇತ್ತೀಚಿಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ದಾಸ್ತಾನು ಕಡಿಮೆಯಿದ್ದು ನೂಕು- ನುಗ್ಗಲು ಆಗುವ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಡಿ.ಎ.ಪಿ. ಗೊಬ್ಬರ ಬಿತ್ತನೆ ಪೂರ್ವದಲ್ಲಿ ಬಹಳಷ್ಟು ಅವಶ್ಯಕತೆಯಿದ್ದು ಸುಮಾರು 35,000 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನಲ್ಲಿ ಬೇಕಾಗಿರುತ್ತದೆ. ಇಲ್ಲಿಯವರೆವಿಗೂ ಸುಮಾರು 6,500 ಮೆಟ್ರಿಕ್ ಟನ್ ಮಾತ್ರ ಸರಬರಾಜು ಆಗಿದೆ. ಕೂಡಲೇ ಬಾಕಿಯಿರುವ 29,000 ಮೆಟ್ರಿಕ್ ಟನ್ ಗೊಬ್ಬರವನ್ನು ಹಾವೇರಿ ಜಿಲ್ಲೆಗೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ರೀತಿ ಯೂರಿಯಾ 65000 ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 38000 ಮೆಟ್ರಿಕ್ ಟನ್ ಇದನ್ನು ಕೂಡಲೇ ಸರಬರಾಜು ಮಾಡಲು ಕ್ರಮ ಜರುಗಿಸಬೇಕು. ರಾಜ್ಯಾದ್ಯಂತ ಮಳೆಯಾಗಿರುವುದರಿಂದ ಗೊಬ್ಬರ ತಯಾರಿಕಾ ಕಂಪನಿಗಳ ಹಾಗೂ ಅಧಿಕಾರಿಗಳ ಸಭೆ ಕರೆದು ತಾವು ಮತ್ತು ತಮ್ಮ ಇಲಾಖೆಯಿಂದ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.




