ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆ ಅಪಹರಣ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ದ ಅಧಿಕಾರಿಗಳು ಭವಾನಿ ರೇವಣ್ಣಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ. ಇನ್ನೊಂದೆಡೆ ಭವಾನಿ ಅವರ ಕಾರು ಚಾಲಕ ಕೂಡ ನಾಪತ್ತೆಯಾಗಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಭವಾನಿ ರೇವಣ್ಣ ವಿಚಾರಣೆಗೆ ಬಂದಿಲ್ಲ. ಅಲ್ಲದೇ ಎಸ್ ಐಟಿಯ ಸಂಪರ್ಕಕ್ಕೂ ಸಿಕ್ಕಿಲ್ಲ.
ಅನಾರೋಗ್ಯದ ನೆಪದಿಂದ ಇದೂವರೆಗೂ ವಿಚಾರಣೆಗೆ ಹಾಜರಾಗಿಯೇ ಇಲ್ಲ. ಆದರೆ ಭವಾನಿ ಎಲ್ಲಿದ್ದಾರೆ? ಭವಾನಿ ಯಾವಾಗ ವಿಚಾರಣೆಗೆ ಬರಲಿದ್ದಾರೆ ಎಂದು ಕಾಯುವ ಸ್ಥಿತಿ ಎಸ್ ಐಟಿ ಅಧಿಕಾರಿಗಳದ್ದಾಗಿದೆ. ಇತ್ತ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಕೂಡ ನಾಪತ್ತೆಯಾಗಿದ್ದಾನೆ. ಆತನಿಗೆ ಎಸ್ಐಟಿ ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದರೂ ಕೂಡ ವಿಚಾರಣೆಗೆ ಬಂದಿಲ್ಲ.
ಎಸ್ಐಟಿ ಪೊಲೀಸರು ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದಾರೆ. ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಎನ್ನುವ ಮಾಹಿತಿ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನದಂದು ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿರುವುದು ಅಜಿತ್ ಎನ್ನುವ ಮಾಹಿತಿಯಿದೆ. ಹೀಗಾಗಿಯೇ ಅಜಿತ್ ಗಾಗಿ ಎಸ್ಐಟಿ ತಂಡ ಹುಡುಕಾಟ ನಡೆಸಿದೆ.




