ವಾಲ್ಮೀಕಿ ಆಶ್ರಮ ಶಾಲೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

2 years ago

ಬಳ್ಳಾರಿ: ಸಂಡೂರು ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಯಶವಂತನಗರದ ಸರ್ಕಾರಿ ಪರಿಶಿಷ್ಟ ಪಂಗಡ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ 1ನೇ ತರಗತಿ ಮತ್ತು 6ನೇ ತರಗತಿಗೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಅರ್ಜಿಗಳನ್ನು ಯಶವಂತನಗರ ಸರ್ಕಾರಿ ಪರಿಶಿಷ್ಟ ಪಂಗಡ ವಾಲ್ಮೀಕಿ ಆಶ್ರಮ ಶಾಲೆಯಲ್ಲಿಯೇ ಪಡೆದು, ಭರ್ತಿಮಾಡಿ ಜೂ.03 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08395-200073 ಗೆ ಸಂಪರ್ಕಿಸಬಹುದು.

Leave a Reply