ತುಮಕೂರು: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎದೆ ಜಲ್ ಎನಿಸುವ ಭೀಕರ ಹತ್ಯೆ ನಡೆದಿದೆ. ಪ್ರೀತಿಸಿ ಮದುವೆಯಾದ ಪತ್ನಿ ಇದೀಗ ತನ್ನ ಬಗ್ಗೆ ಕಾಳಜಿ ತೋರುವುದಿಲ್ಲ, ನಿರ್ಲಕ್ಷ್ಯ ಮಾಡುತ್ತಿದ್ದಾಳೆ. ಆಕೆಗೆ ಯಾರದೋ ಜೊತೆ ಸಂಬಂಧವಿದೆ ಎಂದು ಶಂಕಿಸಿದ ಆಕೆ ಪತಿ ಕೊಲೆ ಮಾಡಿದ್ದಾನೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ತನ್ನ ಪತ್ನಿಯನ್ನು ಕತ್ತು ಕತ್ತರಿಸಿ ಕೊಂದ ನಂತರ ಇಡೀ ರಾತ್ರಿ ದೇಹದ ಚರ್ಮ ಸುಲಿದು, ಅಂಗಾಂಗಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಪುಷ್ಪಾ (35) ಬರ್ಬರವಾಗಿ ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕೊಲೆ ಆರೋಪದ ಮೇಲೆ ಆಕೆಯ ಪತಿ ಶಿವರಾಮನನ್ನು ಪೊಲೀಸರು ಬಂಧಿಸಿದ್ದಾರೆ
ಶಿವಮೊಗ್ಗ ಜಿಲ್ಲೆ ಸಾಗರದ ಪುಷ್ಪ ತಾಲ್ಲೂಕಿನ ಸುಗ್ಗನಹಳ್ಳಿಯ ಶಿವರಾಮನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದೂ ಅಂತರ್ಜಾತಿ ವಿವಾಹ. ದಂಪತಿಗೆ ಎಂಟು ವರ್ಷದ ಗಂಡು ಮಗುವಿದೆ. ಸಾಮಿಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ ಹುಲಿಯೂರುದುರ್ಗದ ಹೊಸಪೇಟೆ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.
ದಂಪತಿ ನಡುವೆ ಸೋಮವಾರ ರಾತ್ರಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟಿಗೆದ್ದ ಶಿವರಾಮ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿದ್ದಾನೆ. ರುಂಡವನ್ನು ಪಕ್ಕದಲ್ಲಿ ಇಟ್ಟುಕೊಂಡು ಚಾಕುವಿನಿಂದ ಇಡೀ ದೇಹದ ಚರ್ಮ ಸುಲಿದಿದ್ದಾನೆ. ಚಾಕುವಿನಿಂದ ಎದೆ, ಗುಪ್ತಾಂಗಗಳನ್ನು ಬಗೆದು ಹಾಕಿದ್ದಾನೆ. ಅಷ್ಟಕ್ಕೇ ಸುಮ್ಮನಾಗದೆ ಅಂಗಾಂಗಗಳನ್ನು ತುಂಡುತುಂಡಾಗಿ ಕತ್ತರಿಸಿ ಹಾಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪುಟ್ಟ ಕೋಣೆ ತುಂಬಾ ರಕ್ತ ಹರಡಿತ್ತು. ಒಂದು ಕಡೆ ರುಂಡ ಮತ್ತು ಮತ್ತೊಂದು ಕಡೆ ವಿಕಾರವಾಗಿ ತುಂಡುತುಂಡಾಗಿ ಕತ್ತರಿಸಿ ಹಾಕಿದ್ದ ದೇಹ ಇತ್ತು. ಕರಳು ಹಾಗೂ ಇತರ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪಕ್ಕದಲ್ಲಿಯೇ ಎಂಟು ವರ್ಷದ ಮಗು ಮಲಗಿತ್ತು. ಆರೋಪಿ ಇಡೀ ರಾತ್ರಿ ಶವದ ಜೊತೆಯಲ್ಲಿಯೇ ಕಳೆದಿದ್ದಾನೆ.
ಮಂಗಳವಾರ ಬೆಳಗಿನ ಜಾವ ಶಿವರಾಮ ತಾನು ಕೆಲಸ ಮಾಡುತ್ತಿದ್ದ ಸಾಮಿಲ್ ಮಾಲೀಕರ ಮಗ ಪ್ರದೀಪ್ ಎಂಬುವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪ್ರದೀಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬೆಳಗಿನ ಜಾವ ಮನೆಗೆ ಹೋದ ಪೊಲೀಸರು ಸ್ಥಳದಲ್ಲಿ ವಿಕಾರವಾಗಿ ಬಿದ್ದಿದ್ದ ಶವವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಏನೂ ನಡೆದಿಲ್ಲ ಎಂಬಂತೆ ಮನೆಯಲ್ಲಿಯೇ ಸಹಜವಾಗಿ ಕುಳಿತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದಲ್ಲಿಯೇ ಇರುವ ಪುಷ್ಪಾ ಸಂಬಂಧಿ ಶಿವಶಂಕರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ನನ್ನ ಹೆಂಡತಿ ಮನೆಯಲ್ಲಿ ಸರಿಯಾಗಿ ಅಡುಗೆ ಮಾಡುತ್ತಿರಲಿಲ್ಲ. ಮೊಬೈಲ್ನಲ್ಲಿ ಸದಾ ಯಾರದೋ ಜೊತೆ ಮಾತನಾಡುತ್ತಿದ್ದಳು. ರಾತ್ರಿ ಮನೆಗೆ ಬಂದಾಗ ಅಡುಗೆ ಮಾಡಿರಲಿಲ್ಲ. ಮಧ್ಯಾಹ್ನ ಉಳಿದ ಅಡುಗೆಯನ್ನು ತಿನ್ನುವಂತೆ ಹೇಳಿದಳು. ಇದರಿಂದ ಜಗಳ ಶುರುವಾಯ್ತು ಎಂದು ಆರೋಪಿ ಹೇಳಿದ್ದಾನೆ.




