ಧಾರವಾಡ: ಜಿಲ್ಲೆಯಲ್ಲಿ ರೈತರಿಗೆ ಅವಶ್ಯಕವಾದ ಎಲ್ಲ ಕೃಷಿ ಪರಿಕರಗಳ ದಾಸ್ತಾನು ಇದ್ದು, ಎಮ್.ಆರ್.ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ತಾಲೂಕುವಾರು ಕೃಷಿ ಪರಿಕರ ಮಾರಾಟಗಾರರ ಸಭೆ ಜರುಗಿಸಿ, ಎಚ್ಚರಿಕೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಲೈಸನ್ಸ್ ಅಮಾನತು, ರದ್ದತಿ ಸೇರಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದ್ದಾರೆ.
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿರುವ ಅವರು, ಕೃತಕ ಅಭಾವ, ಹೆಚ್ಚಿನ ದರದಂತಹ ದೂರುಗಳಿದ್ದಲ್ಲಿ ರೈತರು, ಧಾರವಾಡ ಉಪ ಕೃಷಿ ನಿರ್ದೇಶಕರು (8277931271), ಧಾರವಾಡ ಸಹಾಯಕ ಕೃಷಿ ನಿರ್ದೇಶಕರು(8277931285), ಕಲಘಟಗಿ ಸಹಾಯಕ ಕೃಷಿ ನಿರ್ದೇಶಕರು(8277931291), ಹುಬ್ಬಳ್ಳಿಯ ಉಪ ಕೃಷಿ ನಿರ್ದೇಶಕರು(8277931272), ಹುಬ್ಬಳ್ಳಿ ಸಹಾಯಕ ಕೃಷಿ ನಿರ್ದೇಶಕರು(8277931288), ಕುಂದಗೋಳ ಸಹಾಯಕ ಕೃಷಿ ನಿರ್ದೇಶಕರು(8277931294), ನವಲಗುಂದ ಸಹಾಯಕ ಕೃಷಿ ನಿರ್ದೇಶಕರು(8277931295), ಕೃಷಿ ಜಾಗೃತ ಕೊಶದ ಸಹಾಯಕ ಕೃಷಿ ನಿರ್ದೇಶಕರುಗಳು (8277931376 ಮತ್ತು 8277931274) ಧಾರವಾಡ ಜಂಟಿ ಕೃಷಿ ನಿರ್ದೇಶಕರು (8277931270) ಮತ್ತು ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳಿಗೆ ಸಂಪರ್ಕಿಸಿ ಎಂದು ಮಾಹಿತಿ ಮತ್ತು ದೂರು ನೀಡಬಹುದು ಎಂದು ತಿಳಿಸಿದ್ದಾರೆ.




