ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಯಾವುದೇ ಕಾರಣಕ್ಕೂ ಸನ್ನದುದಾರರಿಗೆ ಕಿರುಕುಳ ನೀಡಬಾರದು ಎಂದು ತಾಕೀತು ಮಾಡಿರುವ ಸಿಎಂ ಸಿದ್ದರಾಮಯ್ಯ, ನೆರೆರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು ಎಂದು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ತೆರಿಗೆ ಸಂಗ್ರಹಕ್ಕೆ ನಿಗದಿ ಪಡಿಸಿರುವ ಗುರಿ ತಲುಪಬೇಕೆಂದು ಸೂಚಿಸಿದರು. ಈ ವೇಳೆ ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.
ಇಲಾಖೆಯಲ್ಲಿ ಖಾಲಿಯಿರುವ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.
ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಆನ್ಲೈನ್ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.



