ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಜೂನ್ ತಿಂಗಳ ಮೊದಲ ಪಾಕ್ಷಿಕದಲ್ಲಿ ಮಳೆಯಾಗುತ್ತಿದ್ದು, ಮುಂಚಿತವಾಗಿ ಬಿತ್ತಿದ ಹೆಸರು, ಉದ್ದು, ಸೋಯಾಅವರೆ, ಶೇಂಗಾ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆಯಾದರೂ, ಭೂಮಿಯ ತೇವಾಂಶ ಹೆಚ್ಚಿಗೆ ಆಗಿರುವ ಕಾರಣ ಈಗಾಗಲೇ ಹುಟ್ಟಿರುವ ಸೋಯಾಅವರೆ, ಹೆಸರು ಹಾಗೂ ಉದ್ದಿನ ಬೆಳೆಗಳು ಹಳದಿ ವರ್ಣಕ್ಕೆ ತಿರುಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸಬೇಕು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ರೈತರು ಈ ಕ್ರಮಗಳನ್ನು ಪಾಲಿಸಬೇಕು. ಹೊಲದಲ್ಲಿ, ಒಡ್ಡುಗಳಲ್ಲಿ ನಿಂತಿರುವ ಹೆಚ್ಚುವರಿ ನೀರನ್ನು ಹರಿ ಮಾಡುವುದರ ಮೂಲಕ ನೀರನ್ನು ಹೊರಹಾಕಬೇಕು. ಹೆಸರು, ಉದ್ದು, ಅಲಸಂದಿ, ಸೋಯಾಅವರೆ, ಶೇಂಗಾ ಇತ್ಯಾದಿ ಬೆಳೆಗಳು ಹಳದಿ ವರ್ಣಕ್ಕೆ ತಿರುಗುತ್ತಿದ್ದಲ್ಲಿ, ಎಲೆಗಳ ಮೂಲಕ ನೀರಿನಲ್ಲಿ ಕರಗುವ ರಸಗೊಬ್ಬರಗಳಾದ, 12:61:00, 0:0:50, 13:00:45, 00:52:34, 19:19:19, ಇವುಗಳಲ್ಲಿ ಯಾವುದಾದರೂ ಒಂದನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ. ಬೆರೆಸಿ ಬೆಳೆಗಳ ಮೇಲೆ ಸಿಂಪಡಿಸಬೇಕು.
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ಅಂತಹ ಬಾಧಿತ ಸಸಿಗಳನ್ನು ಕಿತ್ತು ಒಂದು ಚೀಲದಲ್ಲಿ ತುಂಬಿ ಹೊಲದಿಂದ ಹೊರಗೆ ಹೋಗಿ ಸುಟ್ಟು ಹಾಕಬೇಕು ಇಲ್ಲವೇ ಮಣ್ಣಿನಲ್ಲಿ ಗುಂಡಿ ತೋಡಿ ಹೂಳಬೇಕು. ನೀರು ನಿಂತ ಸನ್ನಿವೇಶದಲ್ಲಿ ಯೂರಿಯಾ ಗೊಬ್ಬರ ಬಳಕೆ ಮಾಡಬಾರದು. ಇದರಿಂದ ರೋಗಗಳ ಬಾಧೆ ಹೆಚ್ಚಾಗುವುದು. ಹದ ಬಂದ ಕೂಡಲೆ ಅಂತರ್ ಬೇಸಾಯ ಕೈಗೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




