ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ವಾಗ್ದಾಳಿ ನಡೆಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬಿಜೆಪಿ ನಾಯಕರ ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಪೆಟ್ರೋಲ್ ಬೆಲೆ 70 ರೂ. ಇದ್ದದ್ದನ್ನು ಹೆಚ್ಚಳ ಮಾಡಿದರು. ಅಡುಗೆ ಅನಿಲ ಬೆಲೆ 1,200 ರೂ. ಗೆ ಹೆಚ್ಚಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಿದೆ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು ಎಂದರು.
ಆಡಳಿತ ನಡೆಸುವವರು ತೆರಿಗೆ ಸಂಗ್ರಹ ಮಾಡಬೇಕಲ್ಲವೇ? ಬೆಲೆ ಇಳಿಸಲು ಬಿಜೆಪಿಯ 17 ಸಂಸದರು ಕೇಂದ್ರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಸವಾಲೆಸೆದರು.
ತೆರಿಗೆ ಸಂಗ್ರಹ ಮಾಡುವುದು ಸಹಜ. ಆದರೆ ಅದು ಸಾರ್ವಜನಿಕರಿಗೆ ಹೊರೆಯಾಗಬಾರದು. ನಮ್ಮ ರಾಜ್ಯದ ತೈಲ ಬೆಲೆ ಬೇರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದರು.




