ಬೆಂಗಳೂರು: ಕಳೆದ ಮೂರು ದಶಕಗಳಿಂದ ಕನ್ನಡ ರಂಗಭೂಮಿಯಲ್ಲಿ ಕಲಾವಿದರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ, ರಂಗವಿಮರ್ಶಕರಾಗಿ, ರಂಗ ತರಬೇತಿ ಶಿಕ್ಷಕರಾಗಿ, ರಂಗಭೂಮಿ ಪತ್ರಿಕೆಯ ಸಂಪಾದಕರಾಗಿ, ರಂಗ ಸಂಘಟಕರಾಗಿ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲುಸುತ್ತಾ ಬಂದಿರುವ ಶಶಿಕಾಂತ ಯಡಹಳ್ಳಿಯವರು ಈ ಸಲದ ಅಂತರಾಷ್ಟ್ರೀಯ “ಆರ್ಯಭಟ” ಪ್ರಶಸ್ತಿಗೆ ರಂಗಭೂಮಿ ವಿಭಾಗದಿಂದ ಆಯ್ಕೆಯಾಗಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
“ಆರ್ಯಭಟ ಸಾಂಸ್ಕೃತಿಕ ಸಂಸ್ಥೆ”ಯು 49ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು 6 ಜನ ವಿದೇಶದಲ್ಲಿದ್ದು ಸಾಧನೆ ಮಾಡಿದ ಕನ್ನಡಿಗರ ಸಮೇತ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿದ ಒಟ್ಟು 60 ಸಾಧಕರಿಗೆ ಈ ವರ್ಷದ “ಆರ್ಯಭಟ” ಪ್ರಶಸ್ತಿಯನ್ನು ಘೋಷಿಸಿದೆ.

ಜೂನ್ 23 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ “ಆರ್ಯಭಟ ಪ್ರಶಸ್ತಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ.ಹೆಚ್.ಬಿ.ಪ್ರಭಾಕರ ಶಾಸ್ತ್ರಿಯವರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ ಪ್ರದಾನ ಮಾಡಲಿದ್ದಾರೆ.
“ಸೃಷ್ಟಿ ಜನನಾಟ್ಯ ಕಲಾ ಕೇಂದ್ರ” ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿ ನಿರಂತರವಾಗಿ ನಾಟಕಗಳನ್ನು ರಚಿಸಿ ನಿರ್ದೇಶಿಸಿ ನಿರ್ಮಿಸುತ್ತಾ ಬಂದಿರುವ ಯಡಹಳ್ಳಿಯವರು ಕನ್ನಡ ರಂಗಭೂಮಿಗರ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ಕೊಡುತ್ತಾ ಬಂದಿದ್ದಾರೆ. “ಸೃಷ್ಟಿ ಅಕಾಡೆಮಿ”ಯನ್ನು ಸ್ಥಾಪಿಸಿ ಕಳೆದ 24 ವರ್ಷಗಳಿಂದ ಮೂರು ಸಾವಿರಕ್ಕೂ ಹೆಚ್ಚು ಯುವಜನರಿಗರ ರಂಗಭೂಮಿಯಾದಿಯಾಗಿ ದೃಶ್ಯಮಾಧ್ಯಮಗಳ ಕುರಿತು ಅಭಿನಯ ಮತ್ತು ನಿರ್ದೇಶನದ ತರಬೇತಿಯನ್ನು ಕೊಡುತ್ತಾ ಬಂದಿದ್ದಾರೆ. ತಮ್ಮದೇ ಆದ ” ಸೃಷ್ಟಿ ಆಪ್ತ ರಂಗಮಂದಿರ” ವನ್ನೂ ದೊಮ್ಮಲೂರಿನಲ್ಲಿ ಸ್ಥಾಪಿಸಿ ಬಡಾವಣಾ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ.
ಒಂದೂವರೆ ದಶಕಗಳ ಕಸಲ “ಇಪ್ಟಾ” ಸಂಸ್ಥೆಯ ಸಂಘಟಕರಾಗಿ ಹಲವಾರು ಬೀದಿನಾಟಕಗಳನ್ನು ರಚಿಸಿ ನಿರ್ದೇಶಿಸಿ ರಾಜ್ಯಾದ್ಯಂತ ಪ್ರದರ್ಶಿಸಿ ಸಾವಿರಾರು ಪ್ರದರ್ಶನಗಳನ್ನು ಮಾಡಿಸಿದ್ದಾರೆ. ಸಾಮಾಜಿಕ ಕಾಳಜಿ ಹಾಗೂ ಜನಸಾಮಾನ್ಯರ ಬಗ್ಗೆ ಕಳಕಳಿ ಇರುವ ನಾಟಕಗಳನ್ನೇ ಹೆಚ್ಚಾಗಿ ಮಾಡಿಸಿದ್ದು ಜನರಲ್ಲಿ ಜಾಗೃತಿಯನ್ನುಂಟು ಮಾಡುವ ನಿಟ್ಟಿನಲ್ಲಿ ತಮ್ಮೆಲ್ಲಾ ಬೀದಿ ನಾಟಕಗಳನ್ನು ಕಟ್ಟಿ ಕೊಟ್ಟಿದ್ದಾರೆ. 30 ಕ್ಕೂ ಹೆಚ್ಚು ಪೂರ್ಣಪ್ರಮಾಣದ ನಾಟಕಗಳನ್ನು ರಚಿಸಿದ್ದು 20 ಕ್ಕೂ ಹೆಚ್ಚು ಪ್ರಿಸೀನಿಯಂ ನಾಟಕಗಳನ್ನು ನಿರ್ದೇಶಿಸಿದ್ದಾರೆ.
ಐದು ವರ್ಷಗಳ ಕಾಲ “ರಂಗಭೂಮಿ ವಿಶ್ಲೇಷಣೆ” ಎನ್ನುವ ರಂಗ ಪತ್ರಿಕೆಯ ಸಂಪಾದಕರಾಗಿ ರಂಗಚಟುವಟಿಕೆಗಳನ್ನು ದಾಖಲಿಸಿದ್ದ ಯಡಹಳ್ಳಿಯವರು ಪ್ರೀಲಾನ್ಸ್ ಪತ್ರಕರ್ತರಾಗಿಯೂ ಕ್ರಿಯಾಶೀಲವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವಾರು ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ಯಾನಲಿಸ್ಟ್ ಆಗಿ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಆಗುಹೋಗುಗಳ ಕುರಿತು ವಿಶ್ಲೇಷಣೆ ಮಾಡುತ್ತಾ ಬಂದಿದ್ದಾರೆ.
ಇಂತಹ ಬಹುಮುಖ ಸಾಂಸ್ಕೃತಿಕ ಲೋಕದ ಪ್ರತಿಭಾನ್ವಿತರಿಗೆ “ಆರ್ಯಭಟ”ದಂತಹ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ದೊರಕಿದ್ದು ಸೂಕ್ತವಾಗಿದೆ. ಶಶಿಕಾಂತ ಯಡಹಳ್ಳಿಯವರಿಗೆ ಅಭಿನಂದನೆಗಳನ್ನು ಅವರ ಒಡನಾಡಿಗಳು ಸಲ್ಲಿಸಿದ್ದಾರೆ.




