ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಮತ್ತು ಪರಿಹಾರ ವಿತರಣೆಯಲ್ಲಿ ಅಕ್ರಮವನ್ನು ಆಡಳಿತ ಪಕ್ಷದ ಸದಸ್ಯರೇ ಅಕ್ರಮ ಬಹಿರಂಗಪಡಿಸಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೂಡಾ ಹಗರಣ ಬಯಲಾಗಿದೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಏಕೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡಿದ ಸಿಡಿ ಫ್ಯಾಕ್ಟರಿ ಈಗ ಬಂದ್ ಆಯ್ತು, ಇದೀಗ ಮುಡಾ ಫ್ಯಾಕ್ಟರಿ ಶುರುವಾಯ್ತು ಎಂದರು.
ಮುಖ್ಯಮಂತ್ರಿ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರದ ಬಗ್ಗೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ ಸುದೀರ್ಘವಾಗಿ ಮಾತನಾಡಿದ್ದಾರೆ. ಅವರು ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ನಿವೇಶನ ನೀಡಬೇಕು ಇಲ್ಲವಾದರೆ 62 ಕೋಟಿ ಪರಿಹಾರ ನೀಡಬೇಕು ಎಂದಿದ್ದಾರೆ. ಈ ಮಾನದಂಡವನ್ನು ಎಲ್ಲ ರೈತರಿಗೂ ಅನ್ವಯಿಸಬೇಕು ಎಂದರು.
ಹಲವು ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ. ಆ ರೈತರು ತಮಗೆ ಬರಬೇಕಾದ ಪರಿಹಾರಕ್ಕಾಗಿ ಇನ್ನು ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಲ್ಲಾ ಇದು ಸರಿಯೇ? ಎಂದರು.
ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ ದೇವರು ಮೆಚ್ಚುತ್ತಾನೆಯೇ? ಮುಡಾ ಹಗರಣದ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ನವರೇ ಒಳಗೇ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದರು.
ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಎಂಬುದೂ ನನಗೆ ಗೊತ್ತಿದೆ. 62 ಕೋಟಿ ಪರಿಹಾರ ಕೇಳುವ ಮುಖ್ಯಮಂತ್ರಿ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲೆಸೆದರು.




