ಬೆಂಗಳೂರು: ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಮನೆ, ಜನಜಾನುವಾರುಗಳು ನೀರಿನಲ್ಲಿ ಮುಳುಗುತ್ತಿದ್ದರೆ, ಕಾಂಗ್ರೆಸ್ ಸರ್ಕಾರ ಮಾತ್ರ ಹಗರಣಗಳಲ್ಲಿ ಮುಳುಗಿದೆ. ಮಂತ್ರಿಗಳು ನಾಪತ್ತೆಯಾಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಭಾರಿ ಮಳೆಯಿಂದ ಕರಾವಳಿ, ಮಲೆನಾಡು, ಬಯಲುಸೀಮೆಯ ಜಿಲ್ಲೆಗಳಲ್ಲಿ ಗುಡ್ಡ ಕುಸಿತ, ಸೇತುವೆಗಳ ಮುಳುಗಡೆ, ಮನೆಗಳ ಕುಸಿತದಿಂದ ಜೀವ ಹಾನಿಯಾಗಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಊಟ, ವಸತಿಯಿಲ್ಲದೇ ನರಕ ಅನುಭವಿಸುತ್ತಿದ್ದಾರೆ. ಆದರೆ, ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿ, ಸಾಂತ್ವನ, ಪರಿಹಾರ ಒದಗಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂದಿದೆ.
ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಮಂತ್ರಿಗಳು ತಮ್ಮ ಅಕ್ರಮಗಳನ್ನು ಮುಚ್ಚಿಕೊಳ್ಳುವಲ್ಲೇ ಬ್ಯುಸಿಯಾಗಿದ್ದು, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಡು ನೀರಿನಲ್ಲೇ ‘ಕೈ’ಬಿಟ್ಟಿರುವ ಸರ್ಕಾರಕ್ಕೆ ನೊಂದವರ, ನಿರಾಶ್ರಿತರ ಕಣ್ಣೀರು ಶಾಪವಾಗದೆ ಬಿಡದು’ ಎಂದಿದೆ.




