ಬೆಂಗಳೂರು: ಭಾರಿ ಮಳೆಯಿಂದ ರಾಜ್ಯದ ಬೆಳಗಾವಿ, ಬಾಗಲಕೋಟೆ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ಈ ಪ್ರದೇಶಗಳ ಬಗ್ಗೆ ವ್ಯಾಪಕ ನಿಗಾ ವಹಿಸಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿದ್ದು, ಪರಿಹಾರ ಕಾರ್ಯದ ಉಸ್ತುವಾರಿಯಲ್ಲಿ ತೊಡಗಿದ್ದಾರೆ ಎಂದರು.
ಕಂದಾಯ ಸಚಿವ ಕೃಷ್ಣಭೈರೇಗೌಡ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಅಗತ್ಯ ಪರಿಹಾರಗಳನ್ನು ಕೊಡಿಸುತ್ತಿದ್ದಾರೆ. ವಿಪಕ್ಷಗಳವರು ತಡವಾಗಿ ಎಚ್ಚೆತ್ತುಕೊಂಡು ಬಾಧಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.
ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾದ ಜನರ ನೆರವಿಗೆ ಧಾವಿಸುವ ಬದಲಿಗೆ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕೆ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ ಅವರು, ಈ ಪಾದಯಾತ್ರೆಗೆ ನಾವು ಯಾವುದೇ ರೀತಿಯ ಅಡ್ಡಿ ಮಾಡುವುದಿಲ್ಲ. ಜನರೇ ಅವರಿಗೆ ಉತ್ತರ ಕೊಡುತ್ತಾರೆ ಎಂದರು.




