ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳಿಗೆ ಉಚಿತ ಅಕ್ಕಿ ನೀಡುವ ಯೋಜನೆ ಸಂಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಉಂಟಾಗಿದ್ದ ಸಂಘರ್ಷಕ್ಕೆ ಇದೀಗ ತಾತ್ಕಾಲಿಕ ವಿರಾಮ ಬೀಳುವ ಲಕ್ಷಣಗಳು ಗೋಚರಿಸಿವೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಮಾಸಿಕ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಲಭ್ಯವಿರುವ ಅಕ್ಕಿ ಕೊರತೆಯಿಂದಾಗಿ ರಾಜ್ಯ ಸರ್ಕಾರ ನೆರೆಯ ರಾಜ್ಯ ಮತ್ತು ಖಾಸಗಿ ಸಂಸ್ಥೆಗಳಿಂದ ಅಕ್ಕಿ ಖರೀದಿಸಿ ಪ್ರತಿಯೊಬ್ಬ ವ್ಯಕ್ತಿಗೆ 5 ಕಿಲೋ ವಿತರಿಸುತ್ತಿದೆ. ಉಳಿದ ಐದು ಕಿಲೋಗೆ ಆಗುವ ಮೊತ್ತವನ್ನು ಹಣದ ರೂಪದಲ್ಲಿ ನೀಡಲಾಗುತ್ತಿದೆ.
ಹಣದ ಬದಲಿಗೆ ಅಕ್ಕಿಯನ್ನು ನೀಡಲು ನಿರ್ಧರಿಸಿದ ರಾಜ್ಯ ಸರ್ಕಾರ ಅದನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ತಗುಲುವ ವೆಚ್ಚವನ್ನು ಭರಿಸುವುದಾಗಿ ತಿಳಿಸಿತ್ತು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿರಲಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು ಲೋಕಸಭೆ ಚುನಾವಣೆಯ ವೇಳೆ ಇದು ಪ್ರಮುಖ ಚರ್ಚೆಯ ವಿಷಯವಾಗಿತ್ತು.
ಇದೀಗ ಕೇಂದ್ರ ಆಹಾರ ಸಚಿವರಾಗಿ ರಾಜ್ಯದವರೇ ಆದ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕರಿಸಿದ್ದು ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯ ಮತ್ತು ಕೇಂದ್ರದ ನಡುವೆ ಉಂಟಾಗಿದ್ದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಕಾಣುತ್ತಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದರು.
ಯಾವುದೇ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರವು ಅಕ್ಕಿಯನ್ನು ಕೊಡಲು ಸಿದ್ಧವಿದೆ. ಇನ್ನು ಕಳೆದ ವರ್ಷ ಕರ್ನಾಟಕ ಸರ್ಕಾರ ಅಕ್ಕಿಯನ್ನು ಕೇಳಿದಾಗ ದೇಶದಾದ್ಯಂತ ಬರಗಾಲದ ಪರಿಸ್ಥಿತಿ ಇತ್ತು. ಹೀಗಾಗಿ, ಕರ್ನಾಟಕದ ಮಾದರಿಯಲ್ಲಿಯೇ ಎಲ್ಲಾ ರಾಜ್ಯಗಳು ಅಕ್ಕಿಯನ್ನು ಕೇಳಿದರೆ ಸ್ಟಾಕ್ ಸಮಸ್ಯೆ ಆಗಬಹುದು ಎಂದು ಅಕ್ಕಿಯನ್ನು ಕೊಡದಿರಲು ತೀರ್ಮಾನ ಮಾಡಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದರು.
ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲೆಡೆ ಉತ್ತಮ ಬೆಳೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಅಕ್ಕಿಯನ್ನು ಕೇಳಿದರೆ 28 ರೂಪಾಯಿ ದರದಲ್ಲಿ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಈಗ ಸದಸ್ಯಕ್ಕೆ ಯಾವುದೇ ರಾಜ್ಯದಿಂದ ಅಕ್ಕಿ ಬೇಕೆಂದು ಮನವಿ ಬಂದಿಲ್ಲ ಎಂದರು.




