ಸೈಕಲ್ ಪ್ಯೂರ್ ಅಗರಬತ್ತಿ ಸಾರಥ್ಯ
ಬೆಂಗಳೂರು, 14 ಆಗಸ್ಟ್ 2024: ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ ತಂಡದ ಮಾಲೀಕರಾಗಿರುವ ಎನ್ಆರ್ ಗ್ರೂಪ್ ಸಂಸ್ಥೆ ಇಂದು ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 2024 ಪಂದ್ಯಾವಳಿಗೆ ತಮ್ಮ ತಂಡವನ್ನು ಪ್ರಕಟಿಸಿತು ಮತ್ತು ಇದೇ ಸಂದರ್ಭದಲ್ಲಿ ತಮ್ಮ ತಂಡದ ಜೆರ್ಸಿಯನ್ನು ಅನಾವರಣಗೊಳಿಸಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಹಾಗೂ ಕೆಎಸ್ಸಿಎ ಆಯೋಜಿಸಿದ್ದ ಆಟಗಾರರ ಹರಾಜು ಪ್ರಕ್ರಿಯೆ ಬಳಿಕ ತಂಡವು ಕಠಿಣ ತರಬೇತಿ ಕಾರ್ಯಕ್ರಮ ನಡೆಸಿತ್ತು. ಆ ಬಳಿಕ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಮಹಾರಾಜ ಟ್ರೋಫಿ 2024 ಪಂದ್ಯಾವಳಿಯು ಆಗಸ್ಟ್ 15 ರಿಂದ ಸೆಪ್ಟೆಂಬರ್ 1ರವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪ್ರತಿಭಾನ್ವೇಷಣೆಯಲ್ಲಿ ಪ್ರತಿಭಾವಂತ ಆಟಗಾರರಾದ ಕಿಶನ್ ಬೇಡರೆ ಮತ್ತು ಗೌತಮ್ ಸಾಗರ್ ಆಯ್ಕೆಯಾಗಿದ್ದರು. ಅದರ ಹೊರತಾಗಿ ಸತತ ಮೂರನೇ ವರ್ಷ ಖ್ಯಾತ ಕ್ರಿಕೆಟ್ ಆಟಗಾರ ಕರುಣ್ ನಾಯರ್ ಅವರು ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದು, ಆ ಅನುಭವವನ್ನು ಬಳಸಿಕೊಂಡು ತಂಡಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

ತಂಡದ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಸಮರ್ಥ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಆರ್ ಎಕ್ಸ್ ಮುರಳೀಧರ್ ಆರ್ ಅವರನ್ನು ಪ್ರಧಾನ ಕೋಚ್ ಆಗಿ ನೇಮಿಸಲಾಗಿದೆ. ಸಹಾಯಕ ಕೋಚ್ ಆಗಿ ವಿಜಯ್ ಮದ್ಯಾಲ್ಕರ್ ಇರುತ್ತಾರೆ. ಬೌಲಿಂಗ್ ಕೋಚ್ ಆಗಿ ಆದಿತ್ಯ ಸಾಗರ್ ಮತ್ತು ತಂಡದ ವ್ಯವಸ್ಥಾಪಕರಾಗಿ ಸುರೇಶ್ ಎಂಆರ್ ಆಯ್ಕೆಯಾಗಿದ್ದಾರೆ. ತಂಡವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಉದ್ದೇಶಕ್ಕೆ ಪೂರಕವಾಗಿ ಸಹಾಯಕ ಸಿಬ್ಬಂದಿ ತಂಡವನ್ನು ಆಯ್ಕೆ ಮಾಡಲಾಗಿದೆ.

ಮೈಸೂರು ವಾರಿಯರ್ಸ್ ತಂಡವನ್ನು ನಾಯಕ ಕರುಣ್ ನಾಯರ್ ಮುನ್ನಡೆಸುತ್ತಾರೆ. ಕೃಷ್ಣಪ್ಪ ಗೌತಮ್, ಸುಚಿತ್ ಜೆ, ಮನೋಜ್ ಭಾಂಡಗೆ, ಕಾರ್ತಿಕ್ ಸಿ ಎ, ವೆಂಕಟೇಶ್ ಎಂ, ಸುಮಿತ್ ಕುಮಾರ್, ವಿದ್ಯಾಧರ್ ಪಾಟೀಲ್, ಕಿಶನ್ ಬೇಡರೆ, ಎಂಡಿ ಸರ್ಫರಾಜ್ ಅಶ್ರಫ್, ಗೌತಮ್ ಮಿಶ್ರಾ, ಗೌತಮ್ ಸಾಗರ್, ಕಾರ್ತಿಕ್ ಎಸ್ ಯು, ದೀಪಕ್ ದೇವಾಡಿಗ, ಧನುಷ್ ಗೌಡ, ಜಾಸ್ಪರ್ ಇ ಜೆ, ಹರ್ಷಿಲ್ ಧರ್ಮಾನಿ, ಸಮಿತ್ ದ್ರಾವಿಡ್, ಸಮ್ಯನ್ ಶ್ರೀವಾಸ್ತವ, ಮತ್ತು ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ತಂಡದ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. ಮೈಸೂರು ವಾರಿಯರ್ಸ್ ತಂಡದ ಮಾಲೀಕರಾದ ಎನ್ಆರ್ ಗ್ರೂಪ್ ಮತ್ತು ಮೈಸೂರಿಗೆ ಗೌರವ ಸಲ್ಲಿಸುವ ಸಲುವಾಗಿ ನೀಲಿ ಮತ್ತು ಹಳದಿ ಬಣ್ಣದ ಸಂಯೋಜನೆಯ ಹೊಸ ಜೆರ್ಸಿಯನ್ನು ಪ್ರದರ್ಶಿಸಲಾಯಿತು.
ಈ ಜೆರ್ಸಿ ತಂಡದ ಶೀರ್ಷಿಕೆ ಪ್ರಾಯೋಜಕರಾದ ಭಾರತದ ಪ್ರಮುಖ ಅಗರಬತ್ತಿ ಬ್ರಾಂಡ್ ಆಗಿರುವ ಸೈಕಲ್ ಪ್ಯೂರ್ ಅಗರಬತ್ತಿ, ಕ್ರೀಡಾ ಸುದ್ದಿ ವಾಹಿನಿ ಜೆ ಎಸ್ ಕೆ1 ಮತ್ತು ಮೈಸೂರಿನ ವಿಶ್ವಾಸಾರ್ಹ ಡೆವಲಪರ್ ಆಗಿರುವ ಸಂಕಲ್ಪ್ ಸಂಸ್ಥೆಯ ಲೋಗೋಗಳನ್ನು ಹೊಂದಿದೆ.
ತಮ್ಮ ತಂಡದ ಕುರಿತು ಮಾತನಾಡಿದ ಮೈಸೂರು ವಾರಿಯರ್ಸ್ನ ಮಾಲೀಕರು ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗಾ, ಇಂದು ನಿಮ್ಮೆದುರು ಮೈಸೂರು ವಾರಿಯರ್ಸ್ ತಂಡದ ಪ್ರತಿಭಾವಂತ ತಂಡವನ್ನು ಪ್ರಕಟಿಸಲು ಸಂತೋಷಗೊಂಡಿದ್ದೇನೆ. ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ನಾವು ಜಯ ಗಳಿಸುವ ವಿಶ್ವಾಸ ಹೊಂದಿದ್ದೇವ ಎಂದರು.
ಮೈಸೂರು ವಾರಿಯರ್ಸ್ನ ಮಾಲೀಕರು ಮತ್ತು ರಂಗಾಸನ್ಸ್ ಏರೋಸ್ಪೇಸ್ನ ಸಿಇಓ ಪವನ್ ರಂಗಾ ಮಾತನಾಡಿ, ಮಹಾರಾಜ ಟ್ರೋಫಿ ಶುರುವಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ ತಂಡವನ್ನು ಪರಿಚಯಿಸಲು ಮತ್ತು ತಂಡದ ಜೆರ್ಸಿ ಅನಾವರಣ ಮಾಡಲು ಸಂತೋಷ ಪಡುತ್ತೇನೆ. ಈ ಬಾರಿ ನಾವು ಅಸಾಧಾರಣ ಪ್ರದರ್ಶನ ನೀಡಲಿದ್ದೇವೆ ಎಂದರು.
ಮೈಸೂರು ವಾರಿಯರ್ಸ್ ತಂಡದ ನಾಯಕ ಕರುಣ್ ನಾಯರ್ ಮಾತನಾಡಿ, ಮೈಸೂರು ವಾರಿಯರ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸುವ ಅವಕಾಶ ಸಿಕ್ಕಿರುವುದು ನನಗೆ ದೊಡ್ಡ ಗೌರವವಾಗಿದೆ. ನಮ್ಮ ತಂಡ ಗೆಲುವು ಸಾಧಿಸುವುದನ್ನು ಎದುರು ನೋಡುತ್ತಿದ್ದೇನೆ ಎಂದರು.
ಪ್ರಧಾನ ತರಬೇತುದಾರರಾದ ಆರ್ಎಕ್ಸ್ ಮುರಳೀಧರ್ ಆರ್ ಮಾತನಾಡಿ, ಮೈಸೂರು ವಾರಿಯರ್ಸ್ ತಂಡದ ಪ್ರಧಾನ ಕೋಚ್ ಆಗುವ ಅವಕಾಶ ಸಿಕ್ಕಿರುವುದರಿಂದ ಖುಷಿ ಇದೆ. ಈ ಪಂದ್ಯಾವಳಿಯಲ್ಲಿ ನಮ್ಮ ತಂಡ ಸಂಪೂರ್ಣ ಸಾಮರ್ಥ್ಯ ಪ್ರದರ್ಶಿಸಿ ಗೆಲುವಿನತ್ತ ಮುನ್ನಡೆಯುವುದನ್ನು ನೋಡಲು ಉತ್ಸುಕನಾಗಿದ್ದೇನೆ ಎಂದರು.




