ಬಳ್ಳಾರಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
- ಕಲಾಗ್ರಾಮದಲ್ಲಿ ಸ್ಪರ್ಶ ಮಕ್ಕಳ ನಾಟಕೋತ್ಸವ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
ಜಿಲ್ಲೆಯ ಪರಿಶಿಷ್ಟ ಜಾತಿಯ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು ಅಥವಾ ಮನವಿ ಪತ್ರಗಳಿದ್ದಲ್ಲಿ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮತ್ತು ಪರಿಶಿಷ್ಟ ವರ್ಗಗಳ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು ಅಥವಾ ಮನವಿ ಪತ್ರಗಳಿದ್ದಲ್ಲಿ ಬಳ್ಳಾರಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ಸೆ.23 ರಂದು ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.
ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕುಂದುಕೊರತೆಗಳ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




