ದಾವಣಗೆರೆಯನ್ನು ಹಸಿರು ನಗರವಾಗಿಸಲು ಪ್ರತಿ ವರ್ಷ ಲಕ್ಷ ಗಿಡಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ: ಜಿ.ಎಂ.ಗಂಗಾಧರಸ್ವಾಮಿ
ಜಿಲ್ಲಾ ಉಸ್ತುವಾರಿ ಸಚಿವರ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಬಡಾವಣೆಗಳಲ್ಲಿ ವನ ಮಹೋತ್ಸವ
ಹಸಿರು ನಗರವಾಗಿಸಲು ಪಾಲಿಕೆ ವ್ಯಾಪ್ತಿಯಲ್ಲಿ ವರ್ಷಕ್ಕೆ ಲಕ್ಷ ಸಸಿ ನೆಡುವ ಗುರಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ: ದಾವಣಗೆರೆ ಸ್ಮಾರ್ಟ್ಸಿಟಿಯಾಗಿದ್ದು ಇದನ್ನು ಹಸಿರು ನಗರವಾಗಿಸಲು ಪ್ರತಿ ವರ್ಷ ವಿವಿಧ ಜಾತಿಯ ಲಕ್ಷ ಗಿಡಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದಾವಣಗೆರೆ ನಗರದ ಶಿವ ಪಾರ್ವತಿ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಬನಶಂಕರಿ ಬಡಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜನ್ಮ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆಯಿಂದ ಏರ್ಪಡಿಸಲಾದ ಸಸಿ ನಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಉತ್ತಮ ಆರೋಗ್ಯಕ್ಕೆ ಶುದ್ಧ ಗಾಳಿ ಸಿಗಬೇಕು, ಹಸಿರು ನಗರವಾಗಿ ಪರಿವರ್ತನೆಯಾಗಬೇಕೆಂದು ನಗರ ವ್ಯಾಪ್ತಿಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲು, ಅದರಲ್ಲಿಯು ಹೆಚ್ಚು ಆಕ್ಸಿಜನ್ ಉತ್ಪಾದಿಸುವ ಮರ, ಗಿಡಗಳನ್ನು ಬೆಳೆಸಲಾಗುತ್ತದೆ. ಈ ಗಿಡಗಳನ್ನು ಪೋಷಿಸಲು ಸ್ಥಳೀಯ ನಿವಾಸಿಗಳು ಸಹ ಕೈಜೋಡಿಸಿ ಬೆಳೆಸಬೇಕು, ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು.
ಈ ನಾಲ್ಕು ಬಡಾವಣೆಗಳಲ್ಲಿ ಬೇವು, ಅರಳಿ, ಹೊಂಗೆ ಸೇರಿದಂತೆ 5400 ಗಿಡಗಳನ್ನು ನೆಡಲಾಗಿದೆ. ಮುಂದಿನ ವರ್ಷ ಮುಂಗಾರು ಹಂಗಾಮು ಆರಂಭವಾದ ತಕ್ಷಣ ಗಿಡಗಳನ್ನು ನೆಡಲು ಕ್ರಮವಹಿಸಲಾಗುತ್ತದೆ. ಇದರಿಂದ ಹೆಚ್ಚು ಗಿಡಗಳು ಉಳಿಯಲಿವೆ. ಶಿವಪಾರ್ವತಿ ಬಡಾವಣೆಯಲ್ಲಿ ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಬಗ್ಗೆ ತಿಳಿಸಿದ್ದು ಪಾಲಿಕೆಯಿಂದ ಕ್ರಮ ವಹಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ರೇಣುಕಾ, ರೈತ ಮುಖಂಡ ಬಲ್ಲೂರು ರವಿಕುಮಾರ್, ಬಡಾವಣೆ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿಜಯಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ನಾಯಕ್ ಹಾಗೂ ವಿವಿಧ ನಿವಾಸಿಗಳು, ಅಧಿಕಾರಿಗಳು ಹಾಜರಿದ್ದರು.




