ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸಿಎಂ ಸಿದ್ದರಾಮಯ್ಯ ಅವರನ್ನು ಹಲವಾರು ರೂಪದಲ್ಲಿ ಸುತ್ತಿಕೊಂಡ ಬೆನ್ನಲ್ಲೇ ಅವರ ಪತ್ನಿ ಮುಡಾ ನೀಡಿದ್ದ ನಿವೇಶನಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಮುಖ್ಯಮಂತ್ರಿ ಅವರ ಪತ್ನಿ ಪಾರ್ವತಿ ಮುಡಾ ತಮಗೆ ನೀಡಿದ್ದ 14 ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಿಂತಿರುಗಿಸುವುದಾಗಿ ಹೇಳಿ ಪತ್ರ ಬರೆದಿದ್ದು ಒಟ್ಟಾರೆ ನಿವೇಶನ ಹಂಚಿಕೆ ಅಕ್ರಮದ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೀಗ ನಿವೇಶನ ಹಂಚಿಕೆ ಅಕ್ರಮದ ಆರೋಪ ತನಿಖೆ ನಡೆಯಲಿದೆ. ಒಂದು ವೇಳೆ ಇದರಲ್ಲಿ ಮುಖ್ಯಮಂತ್ರಿ ಅವರ ಕುಟುಂಬ ಅಕ್ರಮ ಎಸಗಿರುವುದು ಸಾಬೀತಾದರೆ ಅವರು ನಿವೇಶನ ವಾಪಸ್ ನೀಡಿದರು ಕೂಡ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುತ್ತಾರೆ ಕಾನೂನು ತಜ್ಞರು.
ಈ ನಡುವೆ ಕೋರ್ಟ್ ಆದೇಶದಂತೆ ಮುಡಾ ಅಧಿಕಾರಿಗಳು ಲೋಕಾಯುಕ್ತದ ಪೊಲೀಸರು ದೂರುದಾರರಾದ ಸ್ನೇಹಮಯಿ ಕೃಷ್ಣ ಅವರೊಂದಿಗೆ ಮೈಸೂರಿನ ಕೆಸರೆ ಗ್ರಾಮಕ್ಕೆ ತೆರಳಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದರು ಎಂದು ಹೇಳಲಾದ ಭೂಮಿಯ ಪರಿಶೀಲನೆ ನಡೆಸಿದರು.
ಈ ವೇಳೆ ಪೋಡಿ, ನಕ್ಷೆ ಹಾಗೂ ಇತರ ದಾಖಲಾತಿಗಳೊಂದಿಗೆ ಸ್ಥಳದಲ್ಲಿ ಮಹಜರು ನಡೆಸಲಾಯಿತು. ಪಾರ್ವತಿಯವರದು ಎಂದು ಹೇಳಲಾದ ಜಾಗವನ್ನು ಮುಡಾ ಅಭಿವೃದ್ಧಿಪಡಿಸಿ ನಿವೇಶನಗಳನ್ನಾಗಿ ವಿಂಗಡಿಸಿರುವುದು, ನಿವೇಶನ ಸಂಖ್ಯೆಗಳ ಫಲಕಗಳನ್ನು ನೆಟ್ಟಿರುವುದು, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕೆಲಸಗಳು ಪೂರ್ಣಗೊಂಡಿರುವುದು ಕಂಡುಬಂದಿತು.
ಈ ಸ್ಥಳವನ್ನು ದೇವರಾಜು ಎಂಬುವವರು ಖರೀದಿಸಿದ್ದು, ಅವರಿಂದ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದಾರೆ. ಆ ಬಳಿಕ ಇವರು ತಮ್ಮ ಸಹೋದರಿ ಆಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಅರಿಶಿನ ಕುಂಕುಮಕ್ಕೆ ಭೂಮಿಯನ್ನು ಉಡುಗೊರೆ ನೀಡಿದ್ದರು ಎಂದು ಹೇಳಲಾಗಿದೆ. ಈ ಜಮೀನಿನ ಪರಭಾರೆಯೇ ಅಕ್ರಮ ಎಂಬುದು ಸ್ನೇಹಮಯಿ ಕೃಷ್ಣ ಅವರ ದೂರಾಗಿದೆ.
ಈ ನಡುವೆ ತಮಗೆ ನೀಡಲಾದ ಪರ್ಯಾಯ ನಿವೇಶನಗಳನ್ನು ವಾಪಸ್ ಪಡೆಯುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬರದಿರುವ ಪತ್ರವನ್ನು ಅವರ ಮಗ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ ಆಯುಕ್ತರಿಗೆ ತಲುಪಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡು ವಿವಾದವಾಗಿದ್ದರಿಂದ ಬೇಸರಗೊಂಡ ನಮ್ಮ ತಾಯಿ ನಿವೇಶನ ಹಿಂತಿರುಗಿಸಲು ತೀರ್ಮಾನಿಸಿದ್ದಾರೆ ಎಂದರು.
ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಡಾ ಆಯುಕ್ತ ರಘುನಂದನ್, ಪಾರ್ವತಿ ಅವರ ಪರವಾಗಿ ಡಾ.ಯತೀಂದ್ರ ಪತ್ರವನ್ನು ನೀಡಿದ್ದಾರೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸುತ್ತೇವೆ ಎಂದರು.
ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಕೆಲವು ದಾಖಲೆಗಳನ್ನು ಕೇಳಿದ್ದು, ತನಿಖೆಗೆ ಸಹಕಾರ ನೀಡುತ್ತಿದ್ದೇವೆ. ಇ.ಡಿ. ಯಿಂದ ಈವರೆಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದರು.




