ಬೆಂಗಳೂರು: ಝಣ-ಝಣಾ ಕಾಂಚಾಣದಲ್ಲಿ | ಕಾಂಗ್ರೆಸ್ ಸರ್ಕಾರದಲ್ಲಿ | ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ | ನಾಳೆ ರಸ್ತೆಯೂ ಮಾಯ | ಎಲ್ಲಾ ಮಾಯಾ ನಾಳೆ ನಾವೂ ಮಾಯ |ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ @DKShivakumar ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ಯಾಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ. ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ? ಎಂದಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದು ಆಗ್ರಹಿಸಿದ್ದಾರೆ.



