ಬೆಳಗಾವಿ ನಾಗನೂರು ಶ್ರೀ ರುದ್ರಾಕ್ಷಿ ಮಠದಿಂದ ಸೇವಾರತ್ನ ಪ್ರಶಸ್ತಿಗೆ ಕನ್ನಡ ಪರ ಹೋರಾಟಗಾರ ಪಾಲನೇತ್ರ ಆಯ್ಕೆ
ಬೆಳಗಾವಿ: ಜಿಲ್ಲೆಯ ನಾಗನೂರು ಶ್ರೀರುದ್ರಾಕ್ಷಿಮಠದ 2024ರ “ಸೇವಾರತ್ನ” ಪ್ರಶಸ್ತಿಗೆ ಕನ್ನಡಪರ ಚಿಂತಕ, ಕನ್ನಡ ಹೋರಾಟಗಾರ, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ ಆಯ್ಕೆಯಾಗಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕರ್ನಾಟಕ ಏಕೀಕರಣ ಮತ್ತು ಭಾರತ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ನಾಗನೂರು ಶ್ರೀ ರುದ್ರಾಕ್ಷಿಮಠದ ಶತಾಯುಷಿ ಡಾ. ಶಿವಬಸವ ಮಹಾಸ್ವಾಮಿಗಳವರ ನೆನಪಿನಲ್ಲಿ ನಾಡಿನ ಸಾದಕರಿಗೆ ಕೊಡಮಾಡುವ “ಸೇವಾರತ್ನ” ಪ್ರಶಸ್ತಿಯ ಫಲಕದೊಂದಿಗೆ 25,000 ರೂ.ಗಳನ್ನು ನೀಡಿ ಗೌರವಿಸಲಾಗುವುದು.
“ಸೇವಾರತ್ನ” ಪ್ರಶಸ್ತಿಗೆ ಆಯ್ಕೆಯಾದ ಪಾಲನೇತ್ರ ಅವರನ್ನು ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಹಿತರಕ್ಷಣೆಗಾಗಿ ನಡೆದಿರುವ ಕನ್ನಡ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಪಾಲನೇತ್ರ ಕನ್ನಡಪರ ಚಿಂತಕರಾಗಿ, ಪರಿಚಾರಕರಾಗಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿರುವ “ಪಾಲನೇತ್ರ” ಅವರನ್ನು ಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಕನ್ನಡ ಪರ ಹೋರಾಟಗಾರರಿಗೆ ಸಿಕ್ಕ ಗೌರವ.
ಡಿಸೆಂಬರ್ 8ರಂದು ಡಾ. ಶಿವಬಸವ ಮಹಾಸ್ವಾಮಿಗಳ ಜಯಂತಿ ಸಮಾರಂಭದಲ್ಲಿ “ಸೇವಾರತ್ನ” ಪ್ರಶಸ್ತಿಯನ್ನು ಪಾಲನೇತ್ರ ಸ್ವೀಕರಿಸಲಿದ್ದಾರೆ.




