ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಮತದಾನ ನಡೆಯಲಿದೆ. ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
- ವಿಷ್ಣುವರ್ಧನ್ ಸ್ಮಾರಕ ಕುರಿತು ನಮ್ಮ ಕುಟುಂಬದಿಂದ ಯಾವುದೇ ಸ್ಪಷ್ಟನೆ ನಿರೀಕ್ಷೆ ಮಾಡಬೇಡಿ: ಅನಿರುದ್ಧ
- ರಾಜಕೀಯ ಪ್ರೇರಣೆಗೆ ಬಲಿಯಾಗದೆ ಸತ್ಯ ಅರಿಯಬೇಕು: ಪ್ರಿಯಾಂಕ್ ಖರ್ಗೆ
- ಕುವೆಂಪು ವಿವಿಯಲ್ಲಿ ಪಿಎಚ್ಡಿ ಪೂರೈಸಿದ ಐಜಿಪಿ ಹರ್ಷ ಪಿ.ಎಸ್.
- ಬಿಜೆಪಿ ನಾಯಕನಿಂದ ‘ಹಾಸಿಗೆ ಹಂಚಿಕೊಂಡರೆ ಪದವಿ’ ಆಮಿಷ
- 53 ಸೆಕೆಂಡ್ ಗಳಲ್ಲಿ 9 ಬಾರಿ ಪೋಷಕಿಗೆ ‘Shut Up’ ಎಂದು ಕಿರುಚಾಡಿದ ಪ್ರಾಂಶುಪಾಲೆ
ನ್ಯಾಮತಿ ತಾಲ್ಲೂಕಿನ ಚಿನ್ನಿಕಟ್ಟಿ, ಹರಿಹರ ತಾಲ್ಲೂಕಿನ ಸಾರಥಿ, ಉಕ್ಕಡಗಾತ್ರಿ, ದಾವಣಗೆರೆ ತಾಲ್ಲೂಕಿನ ಗೋಪನಾಳ, ಹೆಬ್ಬಾಳು, ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ, ತಣಿಗೆರೆ, ಬೆಳ್ಳಗನೂರು, ಸಂತೆಬೆನ್ನೂರು, ಜಗಳೂರು ತಾಲ್ಲೂಕಿನ ಹನುಮಂತಾಪುರ, ಬಸವನಕೋಟೆ, ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 23ರಂದು ನಡೆಯುವ ಸಂತೆ, ಜಾತ್ರೆಯನ್ನು ನಿಷೇಧಿಸಲಾಗಿದೆ.




