ಕೋಮುವಾದಿ ಬಿಜೆಪಿ ಜೊತೆಗೆ ಸೇರಿ ಮಂತ್ರಿಯಾಗಲು ನಾಚಿಕೆ ಆಗುವುದಿಲ್ಲವೇ?: ಡಾ.ಜಿ.ಪರಮೇಶ್ವರ್

1 year ago

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ನಮ್ಮಲ್ಲಿ ಯಾವುದೇ ಭೇದಭಾವ ಇಲ್ಲ. ನೀವು ಹುಟ್ಟು ಹಾಕುತ್ತಿದ್ದೀರಿ. ನಿಮ್ಮ ಮನೆ ಐದಾರು ಬಾಗಿಲು ಆಗಿವೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದು ಗೊತ್ತಾಗುತ್ತಿಲ್ಲ. ನಮ್ಮಲ್ಲಿ ಯಾರೂ ಗುಂಪುಗಾರಿಕೆ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. 

ಹಾಸನದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತ್ಯತೀತ ಎಂದು ಹೇಳಿಕೊಂಡು 25 ವರ್ಷಗಳಿಂದ ಹಾಸನದ ಜನರಿಗೆ ಮಂಕುಬೂದಿ ಎರಚಿದ ಜೆಡಿಎಸ್ನವರು, ಈಗ ಕೋಮುವಾದಿ ಬಿಜೆಪಿ ಜೊತೆಗೆ ಸೇರಿ ಮಂತ್ರಿಯಾಗಲು ನಾಚಿಕೆ ಆಗುವುದಿಲ್ಲವೇ? ಕೂಡಲೇ ಜಾತ್ಯತೀತ ಎನ್ನುವ ಪದವನ್ನು ತೆಗೆದು ಹಾಕಿ ಎಂದು ಒತ್ತಾಯಿಸಿದರು.

ಬಿಜೆಪಿಯವರು ರಾಜ್ಯದಲ್ಲಿ ಹಿಜಬ್, ಗೋಮಾಂಸದಂತಹ ವಿಷಯಗಳನ್ನು ತೆಗೆದುಕೊಂಡು ಬಂದರು. ಏನೂ ಆಗಲಿಲ್ಲ. ಈಗ ಮುಡಾ ಹಗರಣ, ವಕ್ಫ್ ವಿವಾದಗಳನ್ನು ಇಟ್ಟುಕೊಂಡು ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ನಾವು ಅಲ್ಪಸಂಖ್ಯಾತರ ಪರವಾಗಿ ಇರುವುದು ನಿಜ. ಆದರೆ, ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಅತಿಹೆಚ್ಚು ನೋಟಿಸ್ ಕೊಟ್ಟವರು ಬಿಜೆಪಿಯವರು ಎಂದರು.

ಮುಡಾ ಹಗರಣದ ಹೆಸರಿನಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ, ಅದು ಕೈಗೂಡುವುದಿಲ್ಲ. ಬದಲಾಗಿ ಉಪ ಚುನಾವಣೆಯ 3 ಸ್ಥಾನಗಳಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದರು.

Leave a Reply