ಬಳ್ಳಾರಿ: ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳ್ಳಾರಿ ತಾಲ್ಲೂಕಿನ ಬಸರಕೋಡು ಮತ್ತು ಬಾಣಾಪುರ ಗ್ರಾಮಗಳ ಸಂತ್ರಸ್ತರ ಮನೆಗೆ ಭೇಟಿ ನೀಡಿದರು.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಬಳ್ಳಾರಿ ತಾಲ್ಲೂಕಿನ ಬಸರಕೋಡು ಗ್ರಾಮದ ಕಮ್ಮಾರಿ ಲಲಿತಾ ಅವರ ಮನೆಗೆ ಭೇಟಿ ನೀಡಿ, ಪೋಷಕರ ಜೊತೆ ಮಾತನಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಧೈರ್ಯದಿಂದ ಮಗುವನ್ನು ಆರೈಕೆ ಮಾಡಬೇಕು, ಸರ್ಕಾರದಿಂದ ಹೆಚ್ಚಿನ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ಬಾಣಾಪುರ ಗ್ರಾಮದ ಮೃತೆ ಹೂಗಾರ ನಂದಿನಿ ಅವರ ಮನೆಗೆ ಭೇಟಿ ನೀಡಿದರು. ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ತಹಶೀಲ್ದಾರ ಗುರುರಾಜ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.



