ಬೆಂಗಳೂರು: ದೇಶದ ಧೀಮಂತ ಮುತ್ಸದ್ಧಿ, ನಾಡಿನ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನ ನನಗೆ ಅಪಾರ ನೋವು ತಂದಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಸಂತಾಪವನ್ನು ವ್ಯಕ್ತಪಡಿಸಿದ್ದು, ಬೆಂಗಳೂರು ನಗರವು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗುರುತಾಗುವಲ್ಲಿ ಎಸ್ ಎಂ ಕೃಷ್ಣ ಅವರ ಶ್ರಮ ಅಪಾರ. ಅತ್ಯುತ್ತಮ ಆಡಳಿತಗಾರರಾಗಿದ್ದ ಸನ್ಮಾನ್ಯರು ತನ್ನ ಸನ್ನಡತೆ, ಸುಸಂಸ್ಕೃತ ವ್ಯಕ್ತಿತ್ವದಿಂದ ಸದಾ ನೆನಪಿನಲ್ಲಿ ಉಳಿಯುತ್ತಾರೆ ಎಂದಿದ್ದಾರೆ.
ಇಪ್ಪತ್ತು ವರ್ಷಗಳ ಹಿಂದೆ ಎಸ್ ಎಂ ಕೃಷ್ಣ ಅವರ ವಿರುದ್ಧ ನಾನು ಚಾಮರಾಜಪೇಟೆ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದೆ. ರಾಜಕೀಯವಾಗಿ ನಾವು ಬೇರೆ ಬೇರೆ ದಿಕ್ಕಿನಲ್ಲಿದ್ದರೂ ಎಸ್ ಎಂ ಕೃಷ್ಣರವರು ಒಬ್ಬ ಒಳ್ಳೆಯ ಹಿರಿಯ ಸ್ನೇಹಿತರಾಗಿದ್ದರು ಎಂದರು.
ಅಗಲಿದ ಅವರ ದಿವ್ಯಾತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಈ ನೋವು ನೀಗಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.




