ಪಂಚಮಸಾಲಿ ಹೋರಾಟಗಾರರ ಮೇಲೆ ಬೆಳಗಾವಿಯಲ್ಲಿ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು, @INCKarnataka ಸರ್ಕಾರ ತನ್ನ ಹಿಟ್ಲರ್ ಧೋರಣೆ ಮೂಲಕ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸಿಎಂ @siddaramaiah ನವರೇ, ತಮ್ಮ ಹಿಟ್ಲರ್ ಆಡಳಿತದಲ್ಲಿ ರಾಜ್ಯದ ಜನತೆ ತಮ್ಮ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ಮಾಡಲೂ ಅವಕಾಶವಿಲ್ಲವೇ? ಬಾಯಲ್ಲಿ ಬಸವಣ್ಣನ ವಚನ ಹೇಳಿ ಕೈಯಲ್ಲಿ ಲಾಠಿ ಪ್ರಹಾರ ಮಾಡುವ ತಮ್ಮದು ಯಾವ ಸೀಮೆ ಸಿದ್ಧಾಂತ ಸ್ವಾಮಿ?
ಪ್ರತಿಭಟನಾಕಾರರಿಗೆ ರಕ್ತ ಬರುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದಾರಲ್ಲ, ಪೊಲೀಸರು ಯಾರ ಅಣತಿಯಂತೆ ಈ ದುಸ್ಸಾಹಸ ಮಾಡಿದ್ದಾರೆ?
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಜನರ ಹಕ್ಕು. ಜನರ ಸಮಸ್ಯೆ ಆಲಿಸಿ ಅವರಿಗೆ ಸಮಾಧಾನ ಹೇಳಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ. ಈ ರೀತಿ ಮುತ್ಸದ್ಧಿತನ ತೋರುವುದು ಬಿಟ್ಟು, ಏಕಾಏಕಿ ಲಾಠಿ ಚಾರ್ಚ್ ಮಾಡುವ ಮೂಲಕ ಒಂದು ಸಮುದಾಯವನ್ನು ಪ್ರಚೋದನೆ ಮಾಡಿ ರೊಚ್ಚಿಗೇಳಿಸುವುದು ಯಾವ ಸೀಮೆ ಆಡಳಿತ? ಯಾವ ಸೀಮೆ ನಾಯಕತ್ವ?
ಪ್ರತಿಭಟನಾಕಾರರನ್ನ ಕರೆಸಿ ಮಾತನಾಡಿ. ಅವರ ಮೀಸಲಾತಿ ಬೇಡಿಕೆ ಬಗ್ಗೆ ತಮ್ಮ ನೀಲಿವೇನು ಎನ್ನುವುದನ್ನ ಸ್ಪಷ್ಟ ಪಡಿಸಿ. ಪರಿಸ್ಥಿತಿ ಕೈಮೀರಿಹೋಗುವ ಮುನ್ನ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




