ಬೆಳಗಾವಿ: ಶಾಲಾ ಪ್ರವಾಸಕ್ಕೆಂದು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿದ ಮಕ್ಕಳಿಗೆ ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರಿಸಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಅಂದು ಶರಣರು ಸಾರಿದ ಸಮಾನತೆ, ಜಾತ್ಯತೀತತೆ, ಸಹಬಾಳ್ವೆ, ವ್ಯಕ್ತಿ ಸ್ವಾತಂತ್ರ್ಯ ಘನತೆಯ ಬದುಕಿನ ಹಕ್ಕುಗಳು ಇಂದು ನಮ್ಮ ಸಂವಿಧಾನದ ಆಶಯಗಳಾಗಿವೆ. ಇವು ಪ್ರತಿಯೊಬ್ಬರ ಆಶಯಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಶ್ವಮಾನವರಾಗಿ ಹುಟ್ಟುವ ಮಕ್ಕಳು ಜಾತಿ, ಧರ್ಮ, ವರ್ಣ, ಕಂದಾಚಾರ ಮುಂತಾದ ಸಂಕುಚಿತ ಚಿಂತನೆಯ ಪ್ರಭಾವಕ್ಕೆ ಒಳಗಾಗಿ ಅಲ್ಪಮಾನವರಾಗುತ್ತಿದ್ದಾರೆ ಎಂದರು.
ಮಹಾಪುರುಷರ ಜೀವನಾದರ್ಶಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿಸುವ ಮೂಲಕ ಅವರನ್ನು ಈ ಜಾತಿ, ಧರ್ಮ, ಮೂಢನಂಬಿಕೆಗಳ ಅಲ್ಪತನದಿಂದ ಮುಕ್ತಗೊಳಿಸಿ ವಿಶ್ವಮಾನವರನ್ನಾಗಿಸೋಣ ಎಂದು ಅವರು ಇದೇ ವೇಲೆ ಕರೆ ನೀಡಿದರು.




