ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆ ಕುರಿತು ನವಂಬರ್ 1 ರಿಂದ 15 ರ ಅವಧಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ಹಾಗೂ ಕಿರಿಯ, ಸಹಾಯಕ ಅಭಿಯಂತರರು (ಒಳಚರಂಡಿ) ಇವರುಗಳಿಂದ ಸಮೀಕ್ಷೆ ಕಾರ್ಯ ನಿರ್ವಹಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಯಾವುದೇ ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದಿರುವುದಿಲ್ಲ. ಹಾಗೂ ಸಮೀಕ್ಷೆ ಅವಧಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳೆಂದು 149 ಸ್ವಯಂ ಘೋಷಣಾ ಅರ್ಜಿಗಳು ಸ್ವೀಕೃತವಾಗಿದ್ದು, ಸ್ಥಳ ಪರಿಶೀಲಿಸಲಾಗಿ, ಈ ಅರ್ಜಿದಾರರು ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ತೊಡಗಿರದ ಕಾರಣ ಈ ಅರ್ಜಿಗಳು ತಿರಸ್ಕೃತಗೊಂಡಿವೆ.
ಸ್ವೀಕೃತ ಅರ್ಜಿಗಳ ಪಟ್ಟಿಯನ್ನು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿ.26 ರೊಳಗೆ ಪೂರಕ ದಾಖಲೆಗಳೊಂದಿಗೆ ಆಯುಕ್ತರು, ದಾವಣಗೆರೆ ಮಹಾನಗರ ಪಾಲಿಕೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.



