ಈಗಿನ ನಕಲಿ ಕಾಂಗ್ರೆಸ್ ಪಕ್ಷ: ನಕಲಿ ಗಾಂಧಿ ಕುಟುಂಬದಿಂದ, ನಕಲಿ ಗಾಂಧಿ ಕುಟುಂಬಕ್ಕಾಗಿ, ನಕಲಿ ಗಾಂಧಿ ಕುಟುಂಬಕೊಸ್ಕರ
ಸ್ವಾತಂತ್ರ್ಯ ದೊರಕಿತು. ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು, ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ?
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸ್ವಾತಂತ್ರ ಪೂರ್ವದ ಕಾಂಗ್ರೆಸ್ ಅಂದರೆ ಅದು ರಾಜಕೀಯ ಪಕ್ಷವಾಗಿರಲಿಲ್ಲ. ದೇಶವನ್ನ ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡುತ್ತಿದ್ದ ದೇಶಭಕ್ತರ ಒಕ್ಕೊರಲಿನ ವೇದಿಕೆಯಾಗಿತ್ತು.
ಆದರೆ ಸ್ವತಂತ್ರ ಬಂದ ನಂತರ ಮಹಾತ್ಮ ಗಾಂಧೀಜಿ ಅವರ ಮಾತನ್ನು ಧಿಕ್ಕರಿಸಿ, ಕೇವಲ ಅಧಿಕಾರಕ್ಕಾಗಿ, ಕಾಂಗ್ರೆಸ್ ಪಕ್ಷವನ್ನು ಒಂದು ಕುಟುಂಬದ ಆಸ್ತಿ ಮಾಡಿಕೊಂಡ ನಕಲಿ ಗಾಂಧಿಗಳು ಮತ್ತು ಅವರ ಅನುಯಾಯಿಗಳು ಇವತ್ತು ‘ಗಾಂಧಿ ಭಾರತ’ ಹೆಸರಿನಲ್ಲಿ ಐತಿಹಾಸಿಕ ಬೆಳಗಾವಿ ಅಧಿವೇಶನ ಆಚರಿಸುತ್ತಿರುವುದು ವಿಪರ್ಯಾಸ.
ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೂ ಸಹ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು.
ಸ್ವತಂತ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಗಾಂಧಿ, ಸರ್ದಾರ್ ಪಟೇಲ್ ಅಂತಹ ಮೇರು ನಾಯರನ್ನು ಒಳಗೊಂಡಿದ್ದ ಸ್ವಾತಂತ್ಯ ಪೂರ್ವ ಕಾಂಗ್ರೆಸ್ ಗು ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ನಡೆಸುತ್ತಿರುವ ಈಗಿನ ನಕಲಿ ಕಾಂಗ್ರೆಸ್ ಗು ಸಂಬಂಧವೇ ಇಲ್ಲ.
ದೇಶದ ಜನರಿಂದ ಪದೇ ಪದೇ ತಿರಸ್ಕಾರಗೊಳ್ಳುತ್ತಿರುವ ನಕಲಿ ಗಾಂಧಿಗಳನ್ನ ಮತ್ತೊಮ್ಮೆ ರೀಲಾಂಚ್ ಮಾಡಲು ರಾಜ್ಯದ 20 ಕೋಟಿ ರೂಪಾಯಿ ತೆರಿಗೆ ಹಣವನ್ನ ಪೋಲು ಮಾಡುತ್ತಿರುವ ಸಿಎಂ @siddaramaiah ನೇತೃತ್ವದ @INCKarnataka ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




