ಬೆಂಗಳೂರು: ಅಗ್ಗದ ಪ್ರಚಾರ ತಂತ್ರಗಳು ಮತ್ತು ಬಿಟ್ಟಿ ಭಾಗ್ಯಗಳ ಮೂಲಕ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆಯನ್ನು ಸಮಾಧಿ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಚಿವರಿಗೆ ತಮ್ಮ ಇಲಾಖೆಯ ಆರ್ಥಿಕ ಸ್ಥಿತಿಗತಿ ಅರ್ಥವಾಗಿಲ್ಲ. ಇಲಾಖೆ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಐಎಎಸ್ ಅಧಿಕಾರಿ ಉಪೇಂದ್ರ ತ್ರಿಪಾಠಿ ಅವರು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಂಸ್ಥೆಯನ್ನು ಲಾಭಕ್ಕೆ ತಂದರು. 700 ಕೋಟಿ ಮೊತ್ತವನ್ನು ಠೇವಣಿ ಇಟ್ಟಿದ್ದರು. ಅಂತಹ ಆಸ್ತಿಯನ್ನು ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ಡಿಸೆಂಬರ್ ಅಂತ್ಯಕ್ಕೆ ಸಾರಿಗೆ ಇಲಾಖೆಗೆ ಸರ್ಕಾರ 7,401 ಕೋಟಿ ಕೊಡಬೇಕಿದೆ. ಭವಿಷ್ಯನಿಧಿಗೆ 2,500 ಕೋಟಿ, ನಿವೃತ್ತ ನೌಕರರ ಬಾಕಿ 362 ಕೋಟಿ, ಸಿಬ್ಬಂದಿ ಬಾಕಿ ಪಾವತಿ, ಸರಬರಾಜುದಾರರ ಬಿಲ್, ಇಂಧನ ಬಾಕಿ ಸೇರಿ 1,000 ಕೋಟಿ, ರಜೆ ನಗದೀಕರಣ 700 ಕೋಟಿ, ಒಟ್ಟು ಸಾಲದ ಬಾಕಿ ಹೊಣೆಗಾರಿಕೆ ಸೇರಿ 5,614 ಕೋಟಿ ಆಗುತ್ತದೆ. ಬಾಕಿ ಮೊತ್ತಕ್ಕೆ ಶೇ 10.5 ಬಡ್ಡಿ ಕಟ್ಟಬೇಕಿದೆ ಎಂದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದ ಸಭೆಯಲ್ಲಿ 3,650 ಕೋಟಿ ಹೊರೆಯಾಗುತ್ತಿದೆ ಎಂದು ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ. ಶೇ 15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆ ನಿರ್ಣಯಿಸಿದೆ. ದರ ಪರಿಷ್ಕರಣೆಯಾದರೂ ನಿಗಮಗಳು1,800 ಕೋಟಿ ನಷ್ಟ ಅನುಭವಿಸುತ್ತದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ ಎಂದರು.




