ಶಾಸಕರ ಕಾರು ಡಿಕ್ಕಿ: ಮೂವರು ಸ್ಥಿತಿ ಗಂಭೀರ

1 year ago

ಬೆಂಗಳೂರು: ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅತ್ಯಂತ ವೇಗವಾಗಿ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಮತ್ತೊಂದು ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಾದಯಾತ್ರೆಯಲ್ಲಿ ತೆರಳುತ್ತಿದ್ದವರಿಗೆ ಅಪ್ಪಳಿಸಿದೆ.

ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ ಶಕ್ತಿ ಮಾಲಾಧಾರಿಗಳು ಸಾಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಶಾಸಕ ವಿರೇಂದ್ರ ಪಪ್ಪಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳವುದಾಗಿ ತಿಳಿಸಿದ್ದಾರೆ.

Leave a Reply