ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ ಗಂಗಾಧರಸ್ವಾಮಿ ಜಿ.ಎಂ
ದಾವಣಗರೆ: ದಾವಣಗೆರೆ ಮಹಾನಗರ ಪಾಲಿಕೆಯ ಆವರಗೊಳ್ಳ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮಗಳಿಗೆ ಸೂಚನೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನೆಲಭರ್ತಿ ಜಾಗದಲ್ಲಿ ಸಂಗ್ರಹವಾಗುವ ಪಾರಂಪರಿಕ ತ್ಯಾಜ್ಯವನ್ನು ವಿಲೇಮಾಡಲು ಈಗಾಗಲೇ ಕಾರ್ಯಾದೇಶ ನೀಡಿದ್ದು ತುರ್ತಾಗಿ ಕೆಲಸ ಪ್ರಾರಂಭ ಮಾಡುವ ಮೂಲಕ ಮುಂದಿನ 6 ತಿಂಗಳಲ್ಲಿ ತ್ಯಾಜ್ಯ ಬೇರ್ಪಡಿಸುವ ಕೆಲಸ ಮುಕ್ತಾಯ ಮಾಡಲು ಸೂಚನೆ ನೀಡಿ ಘನತ್ಯಾಜ್ಯ ವಸ್ತುಗಳನ್ನು ಬೇರ್ಪಡಿಸುವುದರಿಂದ ಬೆಂಕಿ ಅವಘಡವನ್ನು ತಕ್ಷಣವೇ ತಡೆಗಟ್ಟಬಹುದಾಗಿದೆ ಎಂದರು.
ಬೆಂಕಿ ಅವಘಡ ಸಂಭವಿಸಲು ಕಿಡಿಗೇಡಿಗಳು ಇಲ್ಲಿಗೆ ಅನಾವಶ್ಯಕವಾಗಿ ಬಾರದಂತೆ ಮತ್ತು ಇಂತಹ ಕಿಡಿಗೇಡಿಗಳ ಮೇಲೆ ನಿಗಾವಹಿಸಲು ಸಿಸಿ ಕ್ಯಾಮೆರಾಗಳನ್ನು ತುರ್ತಾಗಿ ಅಳವಡಿಸುವ ಜೊತೆಗೆ 24*7 ಕಾವಲುಗಾರರನ್ನು ನೇಮಕ ಮಾಡಲು ಸೂಚಿಸಿ ಬೆಂಕಿ ನಂದಿಸಲು ಸುತ್ತಲೂ ನೀರಿನ ಪೈಪ್ಲೈನ್ ಅಳವಡಿಕೆ ಮಾಡಿ ಅಗ್ನಿ ನಂದಕ ಪರಿಕರ ಅಳವಡಿಸಲು ಮತ್ತು ನೆಲಭರ್ತಿ ಜಾಗ ಇನ್ನೂ ಅವಶ್ಯಕತೆ ಇರುವುದರಿಂದ ಖರೀದಿ ಮಾಡಲು ಪ್ರಕ್ರಿಯೆ ಆರಂಭಿಸಲು ತಿಳಿಸಿದರು.
ಆಕಸ್ಮಿಕ ಅಗ್ನಿ ಅವಘಡಗಳನ್ನು ತಡೆಗಟ್ಟಲು ಕ್ರಿಯಾ ಯೋಜನೆ ತಯಾರು ಮಾಡಲು ಪಾಲಿಕೆ ಆಯುಕ್ತರಿಗೆ ಮತ್ತು ಅಗ್ನಿಶಾಮಕ ಮತ್ತು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ವೇಳೆ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.




