ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ಸುನಿಲ್ ಕುಮಾರ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಗೊಂಡ ನಂತರ ಯುವಕರ ತಂಡವನ್ನು ಕಟ್ಟಿದ್ದರು. ಇದರಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಈ ಹುದ್ದೆ ನೀಡಲಾಗಿತ್ತು.
ಮೊದಲಿಗೆ ಪಕ್ಷದ ಒಂದೆರಡು ಸಭೆಗಳಲ್ಲಿ ಪಾಲ್ಗೊಂಡಿದ್ದ ಅವರು, ಆನಂತರದಲ್ಲಿ ಯಾವುದೇ ಸಭೆಗಳಲ್ಲಿ ಪಾಲ್ಗೊಂಡಿರಲಿಲ್ಲ. ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಅಂತರ ಕಾಯ್ದುಕೊಂಡು ಬಂದಿದ್ದರು. ಇದೀಗ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತದೆ ಎಂದು ಘೋಷಿಸಿರುವಾಗಲೇ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿಕೆ ಸಲ್ಲಿಸಿರುವುದು ಕುತೂಹಲ ಕೆರಳಿಸಿದೆ.
ಮೂಲತಃ ಸಂಘ ಪರಿವಾರದ ಜೊತೆ ಗುರುತಿಸಿಕೊಂಡಿರುವ ಅವರು, ಯಾವುದೇ ಭಿನ್ನಮತೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳದೆ ಸಮತೋಲನದ ಅಂತರ ಕಾಪಾಡಿಕೊಂಡೇ ಬಂದಿದ್ದರು. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುನೀಲ್ ಕುಮಾರ್ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡುವ ಮೂಲಕ ಮಹತ್ವದ ಹುದ್ದೆಯನ್ನೇ ನೀಡಲಾಗಿತ್ತು.




