ರಾಜ್ಯದ ಎಲ್ಲ ವರ್ಗಗಳ ಬಡ ಜನರ ಏಳಿಗೆಗಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರುಗಳು ಆರಂಭದಿಂದಲೂ ಊಹಾಪೋಹದ ಮಾತುಗಳನ್ನು ಆಡುತ್ತ ಬಂದಿದ್ದಾರೆ. ಈಗ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ, ಕೇಂದ್ರದಲ್ಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರೇ, ನೀವು ಮಂಡಿಸಿರುವ 2025-26ನೇ ಸಾಲಿನ ಕೇಂದ್ರದ ಬಜೆಟ್ನಲ್ಲಿ ರಾಜ್ಯದ ಅಭಿವೃದ್ಧಿಗೆ ಒಳ್ಳೆಯ ಅನುದಾನ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಮಹತ್ವಕಾಂಕ್ಷೆ ಯೋಜನೆಯನ್ನು ನೀಡುವ ಮೂಲಕ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಬಹುದಿತ್ತು.
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ 5000 ಕೋಟಿ ರೂ. ಅನುದಾನ ಕೊಡುತ್ತೇವೆ. ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಬಜೆಟ್ನಲ್ಲಿ ಓದಿ, ಅನುದಾನ ನೀಡದಿರುವುದಕ್ಕೆ ರಾಜ್ಯದ ಜನತೆಗೆ ಏನೆಂದು ಉತ್ತರಿಸುತ್ತೀರಿ? ರಾಜ್ಯದ ಹಿತ ಕಾಪಾಡುವಲ್ಲಿ ನೀವು ಸಂಪೂರ್ಣವಾಗಿ ವಿಫಲರಾಗಿರುವುದು ಸ್ಪಷ್ಟವಾಗಿದೆ.
ನಿಮ್ಮ ವೈಫಲ್ಯತೆಯನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ಜನರ ದಿಕ್ಕುತಪ್ಪಿಸುವ ಸುಳ್ಳು ಹೇಳಿಕೆಗಳನ್ನು ನೀಡಿ ವಿಷಯಾಂತರ ಮಾಡುತ್ತಿರುವುದು ಹಾಸ್ಯಸ್ಪದ. ಕೈಲಾಗದವರು ಮೈ ಪರಚಿಕೊಂಡರು ಎಂಬಂತಿದೆ ನಿಮ್ಮ ಮಾತುಗಳು.
– ಡಾ ಜಿ ಪರಮೇಶ್ವರ್, ಗೃಹ ಸಚಿವ




