ದೇಶದ ನಿರುದ್ಯೋಗ ಪ್ರಮಾಣ ಶೇ. 6.5ಕ್ಕೆ ಏರಿಕೆ: ಆದರ್ಶ ಯಲ್ಲಪ್ಪ

4 years ago

ಚಿತ್ರದುರ್ಗ: ದೇಶದಲ್ಲಿ ನಿರುದ್ಯೋಗ 6.5% ಏರಿದೆ. ನೋಟ್ ಬ್ಯಾನ್ ಆದ ನಂತರ ಇದರ ಪ್ರಮಾಣದ ಹೆಚ್ಚಾಗಿದೆ ಎಂದು ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾದ ಕಾರ್ಯಾಧ್ಯಕ್ಷ ಆದರ್ಶ ಯಲ್ಲಪ್ಪ ಹೇಳಿದರು.
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದಲ್ಲಿ ರೈತ, ಕಾರ್ಮಿಕರು ಮತ್ತು ಸರ್ಕಾರಿ ನೌಕರರ ಸವಾಲುಗಳು ವಿಷಯದ ಕುರಿತು ಮಾತನಾಡಿದ ಅವರು, ನೆರೆಹೊರೆಯ ರಾಷ್ಟ್ರಗಳಿಗಿಂತ ನಿರುದ್ಯೋಗ ಏರಿಕೆಯ ಪ್ರಮಾಣ ಭಾರತದಲ್ಲಿ ಹೆಚ್ಚಿದೆ. 2012ರಲ್ಲಿ 2.5% ಇದ್ದ ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ. ಪದವೀಧರರು ಪಕೋಡ ಮಾರಿ ಎಂದು ಪ್ರಧಾನಿ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಸಂಘಟಿತ ವಲಯ ಸಂಪೂರ್ಣವಾಗಿ ಕುಸಿಯಲಿದೆ ಎಂದರು.
ಮುಂದಿನ ದಿನಗಳಲ್ಲಿ ಒಬಿಸಿ, ಎಸ್.ಸಿ., ಎಸ್.ಟಿ ಸಮುದಾಯದವರಿಗೆ ಉದ್ಯೋಗಗಳು ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಸ್.ಟಿ.ಪಿ ಅನುದಾನವನ್ನು ಎಸ್ಸಿ, ಎಸ್.ಟಿ ಸಮುದಾಯದ ಉದ್ದಿಮೆದಾರರಿಗೆ ಅನುಕೂಲವಾಯಿತು. ಭೂಮಿ ಖರೀದಿಗೆ ಶೇ. 50ರಷ್ಟು ಹಣ, ಶೇ. 4ರ ಬಡ್ಡಿದರದಲ್ಲಿ ಸಾಲ ಒದಗಿಸಲಾಯಿತು ಎಂದರು.
ಸರ್ಕಾರದ ನೀತಿಗಳಿಂದ ಪರಿಶಿಷ್ಟರಿಗೆ ಸಮಸ್ಯೆಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಂಘಟಿತರಾಗಿ, ಸ್ವಂತ ಉದ್ದಿಮೆಗಳನ್ನು ಸ್ಥಾಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಗಳು ಎದುರಾಗುತ್ತವೆ ಎಂದರು.

Leave a Reply