ರಾಷ್ಟ್ರೀತ ಆರೋಗ್ಯ ಅಭಿಯಾನ
ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ಜಿಲ್ಲಾ ಲಸಿಕಾ ಸಂಗ್ರಹಣ ಘಟಕ ವೈಜ್ಞಾನಿಕವಾಗಿರಬೇಕು, ಇದರಲ್ಲಿ ಯಾವ ಲೋಪದೋಷಗಳು ಬಾರದಂತೆ ಅಧಿಕಾರಿಗಳು ಗಮನ ಹರಿಸಬೇಕೆಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಲಸಿಕಾ ಸಂಗ್ರಹಣಾ ಘಟಕಕ್ಕೆ ನೂತನವಾಗಿ ನಗರದ ಡಿಹೆಚ್ಓ ಕಚೇರಿ ಸಮೀಪ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಲಸಿಕೆಗಳ ಸಂಗ್ರಹಣೆಗಾಗಿ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಬೇಕು,ಈ ಹಿನ್ನಲೆಯಲ್ಲಿ ಕಟ್ಟಡ ಸಂಪೂರ್ಣ ನಿರ್ಮಾಣ ಆಗುವವರೆಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಟ್ಟಡದ ಗುಣ ಮಟ್ಟ ಮಾತ್ರವಲ್ಲದೇ ಇದಕ್ಕೆ ಬಳಸಲಾಗುವ ಎಲ್ಲಾ ಸಾಮಾಗ್ರಿಗಳು ಮತ್ತು ಪರಿಕರಗಳ ಗುಣಮಟ್ಟ ಪರಿಶಿಲನೆ ನಡೆಸುವಂತೆ ಡಿಹೆಚ್ಓಗೆ ಸೂಚನೆ ನಿಡಿದರು.
ಕೇಂದ್ರದ ವಿವರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಆರೋಗ್ಯ ಯೋಜನೆಗಳಿಗೆ ಬೇಕಾದ ಯಾವುದೇ ಲಸಿಕೆಗಳನ್ನು ಈವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಾತ್ಕಾಲಿಕವಾಗಿ ಸಂಗ್ರಹ ಮಾಡಲಾಗುತ್ತಿತ್ತು. ಆದರೆ, ಶಾಶ್ವತ ಘಟಕ ನಿರ್ಮಿಸುವ ನಿಟ್ಟಿನಲ್ಲಿ ಇದೀಗ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಪ್ರತ್ಯೇಕವಾಗಿ ಲಸಿಕಾ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಸರ್ಕಾರದಿಂದಲೇ ಟೆಂಡರು ಕರೆದು ನಿರ್ಮಿಸಲಾಗುತ್ತಿದೆ. ಈ ಘಟಕಕ್ಕೆ ಎನ್ಹೆಚ್ಎಂನಿಂದ ರೂ.55 ಲಕ್ಷ ಅನುದಾನ ಬಂದಿದೆ.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ, ಆರ್ಸಿಹೆಚ್ಓ ಡಾ.ಎ.ಎಂ.ರೇಣುಕಾರಾಧ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಡಿ.ಜಿ.ರಾಘವನ್, ಡಿಎಲ್ಓ ಡಾ.ಮಂಜುನಾಥ್ ಪಾಟೀಲ್, ಎಫ್ಡಬ್ಲುಓ ಡಾ.ರುದ್ರಸ್ವಾಮಿ, ಡಿಎಂಓ ಡಾ.ಗಂಗಾಧರ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.


