ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು CITU ಸಂಯೋಜಿತ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಕೋಟೆಕಾರ್ ಪಟ್ಟಣ ಪಂಚಾಯತ್ ಆಡಳಿತವನ್ನು ಒತ್ತಾಯಿಸಿತು. ಜೊತೆಗೆ ಸಂಘದ ಉನ್ನತ ಮಟ್ಟದ ನಿಯೋಗ ಪಂಚಾಯತ್ ನ ಮುಖ್ಯಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರು ತಮ್ಮಪಾಡಿಗೆ ಬದುಕು ಕಟ್ಟಿಕೊಂಡು ದಿನಕಳೆಯುತ್ತಿದ್ದಾರೆ. ಅದರಲ್ಲಿ ಕೋಟೆಕಾರ್ ಬೀರಿ ಜಂಕ್ಷನ್ ಬಳಿ ಕಳೆದ ಹಲವು ವರ್ಷಗಳಿಂದ ದೈನಂದಿನ ಬದುಕಿಗಾಗಿ ಬಡ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡಿಕೊಂಡು ಬರುತ್ತಿದ್ದಾರೆ. ಅವರಿಗೆ ಕೋಟೆಕಾರ್ ಪಟ್ಟಣ ಪಂಚಾಯತ್ ವತಿಯಿಂದ ಬೀದಿಬದಿ ವ್ಯಾಪಾರಸ್ಥರ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿ ವ್ಯಾಪಾರ ಅಧಿನಿಯಮದಂತೆ ಐಡಿ ಕಾರ್ಡ್ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ ಅವರು ವ್ಯಾಪಾರ ಮಾಡುವ ಪಕ್ಕದಲ್ಲೇ ನೂತನ ಕಟ್ಟಡ ಉದ್ಘಾಟನೆಗೊಂಡಿದ್ದು, ಇದರಿಂದಾಗಿ ಬಡ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡದಂತೆ ತಡೆ ಒಡ್ಡಲಾಗಿದೆ. ನೂತನ ಕಟ್ಟಡದ ನೆಲಮಾಳಿಗೆಯಲ್ಲಿ ಬಾಡಿಗೆ ಆಧಾರಿತ ವ್ಯಾಪಾರ ಮಾಡಲೂ ಕೂಡ ಅಸಾಧ್ಯವಾಗಿದೆ ಎಂದು ಸಂಘ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಬಡ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸ್ಥಳೀಯ ಪಟ್ಟಣ ಪಂಚಾಯತ್ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು, ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರ ಸರ್ವೇ ನಡೆಸಿ ಪಟ್ಟಿ ರೆಡಿ ಮಾಡಬೇಕು. ಅವರೆಲ್ಲರಿಗೂ ಸರಕಾರದ ಗುರುತುಚೀಟಿ, ಸಾಲ ಸೌಲಭ್ಯ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆಂದು ಸಂಘ ಪಟ್ಟಣ ಪಂಚಾಯತ್ ಆಡಳಿತವನ್ನು ಆಗ್ರಹಿಸಿದೆ.
ನಿಯೋಗದಲ್ಲಿ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಸಂಘದ ತಲಪಾಡಿ ವಲಯ ಕಾರ್ಯದರ್ಶಿ ವಿನಾಯಕ ಶೆಣೈ, ಸಂಘದ ತಲಪಾಡಿ ವಲಯ ಮುಖಂಡ ಕಲಂದರ್, ಸಲೀಂ, ನವಾಜ್, ಮಹಮ್ಮದ್ ಹಸನ್, ರವಿರಾಜ್, ಬಶೀರ್, ಇಬ್ರಾಹಿಂ, ಹುಸೈನಾರ್, ಸುಬ್ರಹ್ಮಣ್ಯ, ಶಂಭು, ಇಸಾಕ್, ಶಾಂತಿ ಮುಂತಾದವರು ಇದ್ದರು.








