ಬೆಂಗಳೂರು: ಬಂಜಾರ ಮಹಾಸಭಾ ವತಿಯಿಂದ ಗಾಂಧಿ ಭವನದಲ್ಲಿ ನಡೆದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ರಾಜ್ಯಕ್ಕೆ ಪಿ ಯು ಸಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಸಂಜನಾ ಬಾಯಿ, ರಾಷ್ಟ್ರಪತಿ ಪದಕ ಪಡೆದ ಡಿವೈಎಸ್ಪಿ ಜಯರಾಜ್ ಮತ್ತು ಡಿವೈಎಸ್ಪಿ ಪದೋನ್ನತಿ ಪಡೆದ ಕೃಷ್ಣ ಲಮಾಣಿ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ ಎ. ಆರ್. ಗೋವಿಂದ ಸ್ವಾಮಿ, ಸಾಹಿತಿ ಬಿ ಟಿ ಲಲಿತಾ ನಾಯ್ಕ್, ಸನ್ಮಾನಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿ ಮಾತನಾಡಿದರು. ಪ್ರಕಾಶ್ ರಾಠೋಡ್, ಸುಭಾಷ್ ರಾಠೋಡ್, ಜಾಲಜಾ ನಾಯ್ಕ್, ಪರಿಸರ ತಜ್ಞ ಡಾ. ಡಿ. ಪರಮೇಶ ನಾಯ್ಕ್, ರಾಜ ನಾಯ್ಕ್, ರುದ್ರುಪುನೀತ್ ಉಪಸ್ಥಿತರಿದ್ದರು.

ಕಲಾವಿದರಾದ ಅರುಣ್, ಉಮೇಶ್ ನಾಯ್ಕ್ ಬಾಬಾ ಸಾಹೇಬರ ಗೀತೆ ಗಳನ್ನು ಹಾಡಿದರು. ಬಂಜಾರ ಸಾಹಿತಿಗಳು, ಚಿಂತಕರು, ಕಲಾವಿದರು ಸಮುದಾಯದ ಪ್ರಮುಖರು ಭಾಗವಹಿಸಿದ್ದರು.




